ರೆಹಮಾನ್ ಖಾನ್ 
ರಾಜ್ಯ

ಮನ್ಸೂರ್ ಖಾನ್‍ನೊಂದಿಗೆ ಯಾವುದೇ ಸಂಬಂಧವಿಲ್ಲ: ರೆಹಮಾನ್ ಖಾನ್ ಸ್ಪಷ್ಟನೆ

ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಐಎಂಎ ಮಾಲೀಕ ಮನ್ಸೂರ್ ಖಾನ್‍ಗೂ ತಮಗೂ ...

ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಐಎಂಎ ಮಾಲೀಕ ಮನ್ಸೂರ್ ಖಾನ್‍ಗೂ ತಮಗೂ ಯಾವುದೇ ಸಂಬಂಧವಿಲ್ಲ. ಆತನ ಕಂಪನಿಯ ಬಗ್ಗೆ ಎಚ್ಚರಿಕೆ ವಹಿಸುವಂತೆ ತಿಳಿಸಿದ್ದೆ ಎಂದು ರಾಜ್ಯಸಭೆಯ ಮಾಜಿ ಸದಸ್ಯ ರಹ್ಮಾನ್ ಖಾನ್ ಸ್ಪಷ್ಟಪಡಿಸಿದ್ದಾರೆ.
ಮನ್ಸೂರ್ ಖಾನ್ ನಿನ್ನೆ ವಿಡಿಯೋವೊಂದನ್ನು ಬಿಡುಗಡೆ ಮಾಡಿ ಅದರಲ್ಲಿ ರೆಹಮಾನ್ ಖಾನ್ ಅವರ ಹೆಸರು ಪ್ರಸ್ತಾಪಿಸಿದ್ದ. ಈ ಹಿನ್ನೆಲೆಯಲ್ಲಿ ಇಂದು ರೆಹಮಾನ್ ಖಾನ್ ಸುದ್ದಿಗೋಷ್ಠಿ ನಡೆಸಿ ಈ ಸ್ಪಷ್ಟನೆ ನೀಡಿದ್ದಾರೆ.
ನನ್ನನ್ನು ಭೇಟಿ ಮಾಡಲು ಮನ್ಸೂರ್ ಖಾನ್‍ನನ್ನು ಶಾಸಕ ರೋಷನ್ ಬೇಗ್ ಒಮ್ಮೆ ಕರೆತಂದಿದ್ದರು. ಅದನ್ನು ಹೊರತುಪಡಿಸಿ ನಾನು ಅವರನ್ನು ಭೇಟಿ ಮಾಡಿಲ್ಲ. ಐಎಂಎ ಮುಚ್ಚಿ ಹೋಗಿರುವುದರಿಂದ ರೆಹಮಾನ್ ಖಾನ್ ಅವರಿಗೆ ಸಂತೋಷವಾಗಿರಬಹುದು, ಅವರಿಗೆ ಧನ್ಯವಾದಗಳು ಎಂದು ವಿಡಿಯೋದಲ್ಲಿ ಮನ್ಸೂರ್ ಹೇಳಿದ್ದಾನೆ. ನಾವು ಆತನ ಕಂಪೆನಿಗೆ ಸಹಕಾರ ಮಾಡಿಲ್ಲ ಎಂಬುದನ್ನು ಆತ ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾನೆ ಎಂದು ರೆಹಮಾನ್ ಖಾನ್ ಹೇಳಿದರು.
ಐಎಂಎ ವ್ಯವಹಾರಗಳ ಬಗ್ಗೆ ಮೊದಲಿನಿಂದಲೂ ತಮಗೆ ವಿರೋಧವಿತ್ತು. ತಾನೊಬ್ಬ ಚಾರ್ಟಡ್ ಅಕೌಂಟೆಂಟ್ ಆಗಿರುವುದರಿಂದ ಐಎಂಎ ವ್ಯವಹಾರಗಳ ಬಗ್ಗೆ ತಮಗೆ ಸಂಶಯವಿತ್ತು. ಆತ ಯಾವ ರೀತಿ ವ್ಯವಹಾರ ನಡೆಸುತ್ತಿದ್ದಾನೆ ಎಂಬುದು ನಮಗೆ ಮಾಹಿತಿ ಇರಲಿಲ್ಲ. ಇದೊಂದು ವಂಚಕ ಕಂಪನಿ ಎಂಬುದು 2017ರಲ್ಲಿ ರಾಜ್ಯ ಸರ್ಕಾರಕ್ಕೆ ತಿಳಿದಿತ್ತು. ಆದರೆ ಸರ್ಕಾರ ಕ್ರಮ ಕೈಗೊಳ್ಳದೆ ವಿಳಂಬ ಮಾಡಿತು ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT