ಜಮೀರ್ ಅಹಮದ್ ಖಾನ್ 
ರಾಜ್ಯ

ಐಎಂಎ ವಂಚನೆ ಪ್ರಕರಣ: ಆರೋಪಿ ಮನ್ಸೂರ್ ತಕ್ಷಣ ಶರಣಾದರೆ ಸೂಕ್ತ ರಕ್ಷಣೆ - ಸಚಿವ ಜಮೀರ್ ಖಾನ್

ಐಎಂಎ ಸಂಸ್ಥೆ ವಂಚನೆ ಪ್ರಕರಣದ ರೂವಾರಿ ಮೊಹಮದ್ ಮನ್ಸೂರ್ ಖಾನ್ ಯಾರಿಗೂ ಹೆದರುವ ಅಗತ್ಯವಿಲ್ಲ...

ಬೆಂಗಳೂರು: ಐಎಂಎ ಸಂಸ್ಥೆ ವಂಚನೆ ಪ್ರಕರಣದ ರೂವಾರಿ ಮೊಹಮದ್ ಮನ್ಸೂರ್ ಖಾನ್ ಯಾರಿಗೂ ಹೆದರುವ ಅಗತ್ಯವಿಲ್ಲ ಪೊಲೀಸರಿಗೆ ಶರಣಾಗಿ ವಾಸ್ತವ ಸಂಗತಿ ಏನು ಎನ್ನುವುದನ್ನು ಬಹಿರಂಗಪಡಿಸಬೇಕು ಎಂದು ವಕ್ಫ್ ಮತ್ತು ಅಲ್ಪಸಂಖ್ಯಾತ ಸಚಿವ ಜಮೀರ್‌ ಅಹ್ಮದ್ ಖಾನ್ ಒತ್ತಾಯಿಸಿದ್ದಾರೆ.
ಆರೋಪಿ ಮೊಹಮದ್ ಮನ್ಸೂರ್ ತಕ್ಷಣವೇ ಶರಣಾದರೆ ಸರ್ಕಾರ ಅವರಿಗೆ ಸೂಕ್ತ ರಕ್ಷಣೆ ಒದಗಿಸಲಿದೆ ಎಂದು ಅಭಯ ನೀಡಿರುವ ಅವರು, ರಕ್ಷಣೆ ಸಂಬಂಧ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಜೊತೆ ವೈಯಕ್ತಿವಾಗಿ ಮಾತನಾಡುವುದಾಗಿಯೂ ತಿಳಿಸಿದ್ದಾರೆ.
ವಿಕಾಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ತಾವು ಮನ್ಸೂರ್ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲೂ ಸರ್ಕಾರ ನಿಮ್ಮ ಜೊತೆ ಇದೆ. ಮುಂದೆ ಬಂದು ಸತ್ಯ ಹೇಳಿ ಎಂದು ಧೈರ್ಯ ತುಂಬಿದ್ದಾಗಿ ಸ್ಪಷ್ಟಪಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?