ಪ್ರಸನ್ನಾನಂದ ಸ್ವಾಮೀಜಿ 
ರಾಜ್ಯ

ರಾಜಿನಾಮೆ ನನ್ನ ಕೈಗೆ ಕೊಡಿ, ಸಿಎಂ ಎಚ್‌ಡಿಕೆ ಅಲ್ಲ, ಅವರಪ್ಪನೂ ನನ್ನ ಮಾತು ಕೇಳ್ತಾರೆ: ಪ್ರಸನ್ನಾನಂದ ಸ್ವಾಮೀಜಿ

ನಮ್ಮ ಸಮುದಾಯದ 17 ಶಾಸಕರಿದ್ದಾರೆ. ನೀವು ನನ್ನ ಕೈಗೆ ರಾಜಿನಾಮೆ ನೀಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಲ್ಲ, ಅವರಪ್ಪನೂ ನನ್ನ ಮಾತು ಕೇಳೋ ಹಂಗೆ ಮಾಡುತ್ತೇನೆ ಎಂದು...

ಬೆಂಗಳೂರು: ನಮ್ಮ ಸಮುದಾಯದ 17 ಶಾಸಕರಿದ್ದಾರೆ. ನೀವು ನನ್ನ ಕೈಗೆ ರಾಜಿನಾಮೆ ನೀಡಿ ಮುಖ್ಯಮಂತ್ರಿ ಕುಮಾರಸ್ವಾಮಿ ಅಲ್ಲ, ಅವರಪ್ಪನೂ ನನ್ನ ಮಾತು ಕೇಳೋ ಹಂಗೆ ಮಾಡುತ್ತೇನೆ ಎಂದು ವಾಲ್ಮಿಕಿ ಸಮುದಾಯದ ಪ್ರಸನ್ನಾನಂದ ಸ್ವಾಮೀಜಿ ಹೇಳಿದ್ದಾರೆ.
ವಾಲ್ಮಿಕಿ ಸಮುದಾಯದ ಒಳಿತಿಗಾಗಿ ಪಕ್ಷಾತೀತವಾಗಿ ಶಾಸಕರು ರಾಜಿನಾಮೆ ನೀಡಬೇಕು. ಈ ರೀತಿ ಮಾಡಿದರೆ ಕುಮಾರಸ್ವಾಮಿಗೆ ಬುದ್ಧಿ ಬರುತ್ತದೆ. ತಮ್ಮ ಸಿಎಂ ಪದವಿಯನ್ನು ಉಳಿಸಿಕೊಳ್ಳಲು ಕುಮಾರಸ್ವಾಮಿ ಎಷ್ಟು ನಾಟಕ ಮಾಡುತ್ತಾರೆ ಎಂಬುದು ನನಗೆ ಗೊತ್ತಿದೆ.
ನಮ್ಮ ಶಾಸಕರಿಗೆ ಹೈಕಮಾಂಡ್ ಫೋನ್ ಮಾಡಲ್ಲ. ಆದರೆ ಕೈ ಶಾಸಕರಿಗೆ ಈ ಸಿಎಂ ಫೋನ್ ಮಾಡುತ್ತಾರೆ. ಫೋನ್ ಮಾಡಿ ಅಣ್ಣ ನಿಮಗೇನು ಬೇಕೆಂದು ಕೇಳುತ್ತಾರೆ. ನಿಮಗೇನು ಬೇಕೆಂದು ಕಾಲು ಬೇಕಾದರೂ ಹಿಡೀತಾರೆ. ನಮ್ಮ ಶಾಸಕರು ಒಟ್ಟಾಗಿ ಎಲ್ಲರೂ ರಾಜಿನಾಮೆ ನೀಡಿದರೆ ಕುಮಾರಸ್ವಾಮಿ ಅಲ್ಲ. ಅವರಪ್ಪನೂ ಮಾತು ಕೇಳುತ್ತಾರೆ ಎಂದು ಗುಡುಗಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT