ರಾಯಚೂರಿನಲ್ಲಿ ಇಂದು ಗ್ರಾಮ ವಾಸ್ತವ್ಯಕ್ಕೆ ಮುನ್ನ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ 
ರಾಜ್ಯ

ರಾಯಚೂರು ಜಿಲ್ಲೆಯಲ್ಲಿ ಇಂದು ಸಿಎಂ ಗ್ರಾಮವಾಸ್ತವ್ಯ; ವಿವಿಧ ಯೋಜನೆಗಳನ್ನು ಪ್ರಕಟಿಸಿದ ಕುಮಾರಸ್ವಾಮಿ

ಜಲಧಾರೆ ಯೋಜನೆಯ ಮೂಲಕ ರಾಯಚೂರು ಜಿಲ್ಲೆಗೆ ಸಮಗ್ರ ಕುಡಿಯುವ ನೀರು ಒದಗಿಸುವ ಪ್ರಸ್ತಾವನೆ ಸರಕಾರದ ಮುಂದಿದ್ದು ...

ರಾಯಚೂರು: ಜಲಧಾರೆ ಯೋಜನೆಯ ಮೂಲಕ ರಾಯಚೂರು ಜಿಲ್ಲೆಗೆ ಸಮಗ್ರ ಕುಡಿಯುವ ನೀರು ಒದಗಿಸುವ ಪ್ರಸ್ತಾವನೆ ಸರಕಾರದ ಮುಂದಿದ್ದು ಅದಕ್ಕೆ ಶೀಘ್ರ ಅನುಮೋದನೆ ನೀಡುವ ಮೂಲಕ ಇಡೀ ಜಿಲ್ಲೆಗೆ ನೀರು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ರಾಯಚೂರು ಜಿಲ್ಲೆಯ ಕರೇಗುಡ್ಡದಲ್ಲಿ ಗ್ರಾಮವಾಸ್ತವ್ಯ ನಡೆಸಿರುವ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ರಾಯಚೂರಿನ ವಿವಿಧ ಯೋಜನೆಗಳಿಗೆ 3 ಸಾವಿರ ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಘೋಷಿಸಿದ್ದಾರೆ.
ರಾಯಚೂರು ವಿಶ್ವವಿದ್ಯಾಲಯದ ಬಗ್ಗೆಯೂ ಕ್ಯಾಬಿನೆಟ್​ನಲ್ಲಿ ಚರ್ಚೆ ನಡೆಸಲಾಗುವುದು. ನಾನಿಲ್ಲಿ ಕೇವಲ ಗ್ರಾಮವಾಸ್ತವ್ಯಕ್ಕಾಗಿ ಬಂದಿಲ್ಲ. ಯಾವುದೇ ಯೋಜನೆಗೆ ಹಣದ ಕೊರತೆ ಇಲ್ಲ. ಸಾಲಮನ್ನಾದಿಂದಾಗಿ ಹಣದ ಕೊರತೆಯಾಗಿಲ್ಲ. ಯಾವ ಇಲಾಖೆಯ ಹಣವನ್ನೂ ಕಡಿತ ಮಾಡಿಲ್ಲ. ನನ್ನ ವೇಗಕ್ಕೆ ಅಧಿಕಾರಿಗಳು ಬರಬೇಕು. ನೀರಾವರಿ ಇಲಾಖೆಗೆ 19 ಸಾವಿರ ಕೋಟಿ ರೂಪಾಯಿ ನೀಡಿದ್ದೇನೆ. ರಾಜ್ಯದ ಆರೂವರೆ ಕೋಟಿ ಜನ ನನಗೆ ಅಣ್ಣತಮ್ಮಂದಿರು ಎಂದು ಹೇಳಿದ್ದಾರೆ.
ಗ್ರಾಮವಾಸ್ತವ್ಯಕ್ಕೆ ಶಾಲೆಯಲ್ಲಿ ಶೌಚಾಲಯ ನಿರ್ಮಾಣ ಮಾಡಿರುವುದು ನಿಜ. ಈ ಶೌಚಾಲಯದಿಂದ ಮುಂದೆ ಮಕ್ಕಳಿಗೆ ಅನುಕೂಲ ಆಗುತ್ತದೆ. ನನಗಾಗಿ ಮಲಗಲು ಮಂಚವೂ ಬೇಡ ಎಂದಿದ್ದೇನೆ. ವಾಸ್ತವ್ಯಕ್ಕೆ ಒಂದು ಹಾಸಿಗೆ ಸಾಕು ಎಂದಿದ್ದೇನೆ ಎಂದು ಹೇಳಿದ್ದಾರೆ.
ನಮ್ಮ ಸರ್ಕಾರ ಇಂದೋ ನಾಳೆಯೋ ಬಿದ್ದು ಹೋಗುವುದಿಲ್ಲ. ಸರ್ಕಾರದಿಂದ ಜಿಲ್ಲೆಯ ಸಮಗ್ರ ಅಭಿವೃದ್ಧಿಯಾಗುತ್ತದೆ. ರಾಜ್ಯದಲ್ಲಿ ನೀರಿನ ಕೊರತೆ ಇದೆ. ಕೇವಲ ಬೆಂಗಳೂರು ಮಾತ್ರವಲ್ಲ, ಎಲ್ಲ ಜಿಲ್ಲೆಗಳಲ್ಲೂ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಆಗಬೇಕಿದೆ. ನೀರಿನ ಲಭ್ಯತೆ ಮೇಲೆ ಕೆಲಸ ಆಗುತ್ತದೆ. ಮೈತ್ರಿ ಸರ್ಕಾರ ತೆಗೆದುಕೊಂಡ ನಿರ್ಣಯ, ಯೋಜನೆಗಳು ಜನರಿಗೆ ಗೊತ್ತಾಗಲು ಐದಾರು ತಿಂಗಳು ಬೇಕಾಗಿದೆ. ಶಿಕಾರಿಪುರಕ್ಕೆ ನೀರಾವರಿಗೆ 500 ಕೋಟಿ ರೂ. ಕೊಟ್ಟಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಫಲಿತಾಂಶ ಮೂಡದ ಹಿನ್ನೆಲೆಯಲ್ಲಿ ಮತ್ತೆ ಗ್ರಾಮ ವಾಸ್ತವ್ಯಕ್ಕೆ ಮೊರೆ ಹೋಗಿರುವ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಉತ್ತರ ಕರ್ನಾಟಕದ ಭಾಗದಲ್ಲಿ ತಮ್ಮ ಕಾರ್ಯಕ್ರಮದ ಮೂಲಕ ಜನತೆಯ ಕಷ್ಟ-ಸಮಸ್ಯೆಗಳನ್ನು ನೇರವಾಗಿ ಆಲಿಸಿ ಪರಿಹಾರ ಒದಗಿಸಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT