ಮುರಗೇಶ್ ಚೆನ್ನಣ್ಣನವರ್ ಹಾಗೂ ಕುಟುಂಬ 
ರಾಜ್ಯ

ಧಾರವಾಡ: ಗಿಡ ನೆಟ್ಟು ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಸಂಚಾರಿ ಪೊಲೀಸ್

ಧಾರವಾಡದ ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಮನೆಯ ರಸ್ತೆಯಲ್ಲಿ 20 ಸಸಿಗಳನ್ನು ನೆಟ್ಟು, 100ಕ್ಕೂ ಹೆಚ್ಚು ಸಸಿಗಳನ್ನು ನೆರೆಹೊರೆಯವರಿಗೆ....

ಧಾರವಾಡ: ಧಾರವಾಡದ ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಮ್ಮ ಮನೆಯ ರಸ್ತೆಯಲ್ಲಿ 20 ಸಸಿಗಳನ್ನು ನೆಟ್ಟು, 100ಕ್ಕೂ ಹೆಚ್ಚು ಸಸಿಗಳನ್ನು ನೆರೆಹೊರೆಯವರಿಗೆ ವಿತರಿಸುವ ಮೂಲಕ ತಮ್ಮ 10ನೇ ವಿವಾಹ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಇತರರಿಗೆ ಮಾದರಿಯಾಗಿದ್ದಾರೆ.
ಸಂಚಾರಿ ಇನ್ಸ್ ಪೆಕ್ಟರ್ ಮುರಗೇಶ್ ಚೆನ್ನಣ್ಣನವರ್ ಅವರು ಜೂನ್ 18ರಂದು ಶಿವಗಿರಿಯ 18ನೇ ಕ್ರಾಸ್ ನಲ್ಲಿ ನಾಲ್ಕು ವಿಧದ 20 ಸಸಿಗಳನ್ನು ನೆಟ್ಟಿದ್ದು, ಪ್ರಾಣಿಗಳಿಂದ ಅವುಗಳನ್ನು ರಕ್ಷಿಸಲು ಬೇಲಿ ಸಹ ಹಾಕಿದ್ದಾರೆ. ಚೆನ್ನಣ್ಣನವರ್ ಈ ಕಾರ್ಯಕ್ಕೆ ಪರಿಸರ ವಾದಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂಡಿಯನ್ ಎಕ್ಸ್ ಪ್ರೆಸ್ ಜತೆ ಮಾತನಾಡಿದ ಚೆನ್ನಣ್ಣನವರ್, ಹಲವು ಕಾರ್ಯಕ್ರಗಳಲ್ಲಿ ನಾನು ಸಸಿ ನೆಡುವ ಮೂಲಕ ಆ ಕಾರ್ಯಕ್ರಮವನ್ನು ಉದ್ಘಾಟಿಸುತ್ತೇನೆ. ಇದರ ಹೊರತಾಗಿಯೂ ಜನರು ಹೆಚ್ಚು ಹೆಚ್ಚು ಸಸಿಗಳನ್ನು ನೆಡಬೇಕು. ಈ ಮೂಲಕ ಕಾಡಿನ ನಾಶ ತಡೆದು, ಹಸಿರು ಹೆಚ್ಚಿಸಬೇಕು ಎಂದಿದ್ದಾರೆ.
ಸಾಮಾಜಕ್ಕಾಗಿ ಯಾರಾದರೂ ಏನಾದರೂ ಮಾಡಲಿ ಎಂದು ಕಾಯುವುದರ ಬದಲು ನಾವೇ ಸಮಾಜಕ್ಕಾಗಿ ಏನಾದರೂ ಮಾಡಬೇಕು. ಈ ಮೂಲಕ ನಾವು ಇತರರಿಗೆ ಮಾದರಿಯಾಗಬೇಕು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT