ಮೈಸೂರು ರಾಜಮನೆತನದ ಸಮಾಧಿಯಿರುವ ' ಮಧುವನ' 
ರಾಜ್ಯ

ಮತ್ತೊಂದು ಪ್ರವಾಸಿ ತಾಣ: ಮೈಸೂರು ಒಡೆಯರ ಸಮಾಧಿಗಳಿರುವ ಮಧುವನ!

ಎಲ್ಲವೂ ಅಂದುಕೊಂಡಂತೆ ಆದರೆ ಮೈಸೂರು ರಾಜ ವಂಶಸ್ಥರ ಸಮಾಧಿಗಳಿರುವ ಮಧುವನ ಶೀಘ್ರದಲ್ಲೇ ಪ್ರವಾಸಿ ತಾಣವಾಗಿ ಬದಲಾಗಲಿದೆ, ಮೈಸೂರು ...

ಮೈಸೂರು: ಎಲ್ಲವೂ ಅಂದುಕೊಂಡಂತೆ ಆದರೆ ಮೈಸೂರು ರಾಜ ವಂಶಸ್ಥರ ಸಮಾಧಿಗಳಿರುವ ಮಧುವನ ಶೀಘ್ರದಲ್ಲೇ ಪ್ರವಾಸಿ ತಾಣವಾಗಿ ಬದಲಾಗಲಿದೆ, ಮೈಸೂರು ಆಳಿದ ರಾಜ ಮನೆತನ ಒಡೆಯರ್ ವಂಶದಲ್ಲಿ ವಿಧಿವಶರಾಗಿರುವ ರಾಜರುಗಳ ಸಮಾಧಿ ಮತ್ತೊಂದು ಆಕರ್ಷಣೆಯ ಕೇಂದ್ರ ಬಿಂದುವಾಗಲಿದೆ.
ಮಂಗಳವಾರ ಮಧುವನದಲ್ಲಿ ಬೆಳೆದಿರುವ ಪೊದೆ,ಗಿಡ ಗಂಟಿಗಳನ್ನು  ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ, ಸುಮಾರು ಐದು ಎಕರೆ ಜಾಗದಲ್ಲಿರುವ ಮಧುವನವನ್ನು ಖಾಸಾ ಬೃಂದಾವನ ಎಂದೇ ಪ್ರಸಿದ್ಧಿಯಾಗಿತ್ತು. ಮೈಸೂರು ಒಡೆಯರು ಮತ್ತವರ ಮನೆತನದ ಸಮಾಧಿಗಳಿವೆ.
ರಣಧೀರ ಕಂಠೀರವ ನರಸಿಂಹ ರಾಜ ಒಡೆಯರ್, 9ನೇ ಚಾಮರಾಜ ಒಡೆಯರ್ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಸೇರಿದಂತೆ ಹಲವು ರಾಜರ ಸಮಾಧಿಗಳಿವೆ,
ನಾಲ್ವಡಿ ಒಡೆಯರ್ ಅವರ ವಿಧವೆ ತಾಯಿ ಕೆಂಪನಂಜಮ್ಮಣ್ಣಿ ಹಾಗೂ ಜಯಚಾಮರಾಜೇಂದ್ರ ಒಡೆಯರ್ ಅವರನ್ನು ಇಲ್ಲಿಯೇ ಸಮಾಧಿ ಮಾಡಲಾಗಿದೆ.
ಶ್ರೀಕಂಠದತ್ತ ಒಡೆಯರ್ ಟ್ರಸ್ಟ್ ಅಡಿಯಲ್ಲಿ  ಮಧುವನ ಸ್ವಚ್ಛತಾ ಕಾರ್ಯ ಆರಂಭಿಸಲಾಗಿದ್ದು,  ಪ್ರವಾಸಿಗರ ಹಿತದೃಷ್ಠಿಯಿಂದ ರಾಣಿ ಪ್ರಮೋದಾ ದೇವಿ ಮಧುವನಕ್ಕೆ ಹೊಸ ಲುಕ್ ಕೊಡಲು ನಿರ್ದರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

SCROLL FOR NEXT