ಬಿಜೆಪಿ ಸಂಸದರಿಗೆ ಚಕ್ರವರ್ತಿ 'ಚಡಿ'ಯೇಟು! 
ರಾಜ್ಯ

ಮೋದಿ ಮತಭಿಕ್ಷೆಯ ಫಲಾನುಭವಿಗಳು ಧಿಮಾಕಿನಿಂದ ಸಂಭ್ರಮಿಸಬಾರದು: ಬಿಜೆಪಿ ಸಂಸದರಿಗೆ ಚಕ್ರವರ್ತಿ 'ಚಡಿ'ಯೇಟು!

ನಾಲ್ಕು ಲಕ್ಷ ಮತಗಳ ಅಂತರದಿಂದ ಗೆದ್ದವರೂ ನಲವತ್ತೇ ಸಾವಿರ ಮತಗಳ ಅಂತರದಿಂದ ಗೆದ್ದವರು ಎಲ್ಲರೂ ಮೋದಿ ಮತಭಿಕ್ಷೆಯ ಫಲಾನುಭವಿಗಳೇ ಇದನ್ನು

ಬೆಂಗಳೂರು: ನಾಲ್ಕು ಲಕ್ಷ ಮತಗಳ ಅಂತರದಿಂದ ಗೆದ್ದವರೂ ನಲವತ್ತೇ ಸಾವಿರ ಮತಗಳ ಅಂತರದಿಂದ ಗೆದ್ದವರು ಎಲ್ಲರೂ ಮೋದಿ ಮತಭಿಕ್ಷೆಯ ಫಲಾನುಭವಿಗಳೇ ಇದನ್ನು ಅರಿತುಕೊಂಡು ಸಂಸದರು ಕೆಲಸ ಮಾಡಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಬಿಜೆಪಿ ಸಂಸದರ ವಿರುದ್ಧ ಚಾಟಿ ಬೀಸಿದ್ದಾರೆ.
ಈ ಸಂಬಂಧ ತಮ್ಮ ಫೇಸ್ ಬುಕ್ ಪೋಸ್ಚ್ ನಲ್ಲಿ ಬರೆದುಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಮೋದಿ ಒಬ್ಬರು ಇಲ್ಲದೇ ಹೋಗಿದ್ದರೆ ಕರ್ನಾಟಕದ ಬಹುತೇಕ ಸಂಸದರ ಪರಿಸ್ಥಿತಿ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಎಚ್ ಮುನಿಯಪ್ಪನವರಿಗಿಂತಲೂ ಭಿನ್ನವಾಗಿರುತ್ತಿರಲಿಲ್ಲ. ಸೋಲು ಹೀನಾಯವಾಗಿರುತ್ತಿತ್ತು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಗೆಲುವು ಮೋದಿಯ ಹೆಸರಿಗೆ ಮಾತ್ರವಲ್ಲ, ಅವರು ಮಾಡಿದ ಕೆಲಸಕ್ಕೆ, ತೆಗೆದುಕೊಂಡ ನಿರ್ಣಯಗಳಿಗೆ ಹಾಗೂ ರಾಷ್ಟ್ರಹಿತಕ್ಕೆ ಬದ್ಧವಾದ ಅವರ ಬದುಕಿನ ರೀತಿ ನೀತಿಗಳಿಂದಾಗಿ ಕರ್ನಾಟಕದ ಸಂಸದರಿಗೆ ಗೆಲುವು ಸಿಕ್ಕಿತು. ಹೀಗಾಗಿ ತಮ್ಮದಲ್ಲದ ಗೆಲುವಿಗೆ ಧಿಮಾಕಿನಿಂದ ಸಂಭ್ರಮಿಸುವ ಬದಲು ಮಾಡಬೇಕಾಗಿರುವ ಕೆಸಲವನ್ನು ಮಾಡಬೇಕು.
ತಮ್ಮ ಕ್ಷೇತ್ರದ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು, ಮೈಗಳ್ಳತನ ಬಿಟ್ಟು ಕೆಲಸ ಮಾಡಬೇಕು,. ಇತ್ತೀಚೆಗೆ ಸದಾನಂದಗೌಡ ಜಾತಿ ಹೆಸರು ಹೇಳಿಕೊಂಡು ಸಾಂಪ್ರದಾಯಿಕ ರಾಜಕಾರಣಕ್ಕೆ ಮತ್ತೆ ಅಡಿ ಇಡುತ್ತಿದ್ದಾರೆ ಹಾಗೆಯೇ ಎಮರ್ಜೆನ್ಸಿ ಆಸ್ಪತ್ರೆಗಾಗಿ ಉತ್ತರ ಕನ್ನಡದ ಜನ ಹೋರಾಟ ನಡೆಸುತ್ದಿದ್ದಾರೆ, ಅದಕ್ಕಾಗಿ ಅನಂತ್ ಕುಮಾರ್ ಹೆಗಡೆ ಭೇಟಿ ಮಾಡಿ ಮನವಿ ಸಲ್ಲಿಸಿದರು, ಈ ವೇಳೆ ಪ್ರತಿಕ್ರಿಯಿಸಿರುವ ಅನಂತ್ ಕುಮಾರ್ ಹೆಗಡೆ ರಾಜ್ಯಕ್ಕೆ ಸೇರಿರುವ ಕೆಲಸ ತಾನು ಮಾಡುವುದಿಲ್ಲ ಎಂದು ಹೇಳಿದ್ದಾರೆ,
ಒಬ್ಬ ಸಂಸದರಾಗಿ ರಾಜ್ಯ ಸರ್ಕಾರವನ್ನು ಒಂದು ಕೆಲಸ ಮಾಡಿಕೊಡಿಸುವಂತೆ ಕೇಳಲಾಗದೇ ಎಂದು ಪ್ರಶ್ನಿಸಿದ್ದಾರೆ ವೋಟು ಹಾಕಿದ ಮತದಾರ ಪ್ರಭು ಇವರೆಲ್ಲವನ್ನು ಮೈ ಬಗ್ಗಿ ದುಡಿಯುವಂತೆ ಮಾಡುವ ಸಮಯ ಬಂದಿದೆ ಎಂದು ಪೋಸ್ಚ್ ನಲ್ಲಿ ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT