ಕೃಷ್ಣ ಭೈರೇಗೌಡ 
ರಾಜ್ಯ

ಹಣಕಾಸು ಆಯೋಗದಲ್ಲಿ ದಕ್ಷಿಣ ಭಾರತದ ಪ್ರತಿನಿಧಿ ಇಲ್ಲದಿರುವುದು ದುರದೃಷ್ಟಕರ: ಕೃಷ್ಣ ಭೈರೇಗೌಡ

15 ನೇ ಹಣಕಾಸು ಆಯೋಗ ಕರ್ನಾಟಕದ ಭೇಟಿ ಮುಕ್ತಾಯವಾಗಿದೆ. ಆಯೋಗದ ಭೇಟಿಯ ಒಂದು ದಿನದ ತರುವಾಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ.....

ಬೆಂಗಳೂರು: 15 ನೇ ಹಣಕಾಸು ಆಯೋಗ ಕರ್ನಾಟಕದ ಭೇಟಿ ಮುಕ್ತಾಯವಾಗಿದೆ. ಆಯೋಗದ ಭೇಟಿಯ ಒಂದು ದಿನದ ತರುವಾಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಮಾತನಾಡಿ ಆಯೋಗದಲ್ಲಿ ದಕ್ಷಿಣ ರಾಜ್ಯಗಳ ಯಾವೊಬ್ಬ ಸದಸ್ಯರೂ ಇಲ್ಲ ಎಂಬುದನ್ನು ಎತ್ತಿ ತೋರಿಸಿದ್ದಾರೆ.ಮತ್ತು ಇದು  ‘ದುರದೃಷ್ಟಕರ’ ಎಂದ ಸಚಿವರು  2015-2020ರ ಅವಧಿಯಲ್ಲಿ ಕೇಂದ್ರ ಹಣಕಾಸು ಹಂಚಿಕೆಗಳಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. 
ಟ್ವೀಟ್‌ಗಳ ಸರಣಿ ಮೂಲಕ ಕೇಂದ್ರ ಸರ್ಕಾರದ ಬಗೆಗೆ ಟೀಕಿಸಿದ ಕೃಷ್ಣ ಬೈರೇಗೌಡ ಈಗಲಾದರೂ ಇದು ಸರಿಹೋಗಲಿದೆ ಎಂದು ಭಾವಿಸುವುದಾಗಿ ಹೇಳಿದ್ದಾರೆ.
"ಐದು ಸದಸ್ಯರ 15 ನೇ ಹಣಕಾಸು ಆಯೋಗದಲ್ಲಿದಕ್ಷಿಣ ಭಾರತದಿಂದ ಒಬ್ಬ ಸಮರ್ಥ ವ್ಯಕ್ತಿಯೂ ಇಲ್ಲದಿರುವುದು ದುರದೃಷ್ಟಕರ" ಸಚಿವರು ಹೇಳಿದ್ದಾರೆ.
ಎನ್ ಕೆ ಸಿಂಗ್ ಅವರ ಅಧ್ಯಕ್ಷತೆಯಲ್ಲಿರುವ ಈ ಆಯೋಗವು ಭಾರತ ಸರ್ಕಾರದ ಮಾಜಿ ಹಣಕಾಸು ಕಾರ್ಯದರ್ಶಿ ಅಜಯ್ ನಾರಾಯಣ್ ಝಾ  ಮಾಜಿ ಮುಖ್ಯ ಆರ್ಥಿಕ ಸಲಹೆಗಾರ,ಡಾ.ಅಶೋಕ್ ಲಾಹಿರಿ, ಎನ್‌ಐಟಿಐ ಆಯೋಗ್ ಸದಸ್ಯ ಡಾ.ರಮೇಶ್ ಚಂದ್ಡಾ.ಅನೂಪ್ ಸಿಂಗ್. ಆಯೋಗದ ಇತರೆ ಸದಸ್ಯರಾಗಿದ್ದಾರೆ.
2015-2020ರ ಅವಧಿಯಲ್ಲಿ ಕರ್ನಾಟಕಕ್ಕೆ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ ಕೇವಲ 1,527 ಕೋಟಿ ರೂ ಕೊಟ್ಟಿದೆ. ಮಹಾರಾಷ್ಟ್ರಕ್ಕೆ 8,195 ಕೋಟಿ ರೂ. ಸಿಕ್ಕಿದೆ. "ಕೇಂದ್ರ ಸರ್ಕಾರದ ಈ ಕ್ರಮವನ್ನು ಪ್ರಸಕ್ತ ಆಯೋಗದ ಸದಸ್ಯರು ನಿವಾರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ" ಎಂದು ಸಚಿವರು ಹೇಳಿದ್ದಾರೆ.
ಆಯೋಗವು ಎರಡು ದಿನಗಳಲ್ಲಿ ಸರಣಿ ಸಭೆಗಳನ್ನು ನಡೆಸಿದ್ದು ರಾಜ್ಯವು ಯೋಗಕ್ಕೆ ಸಲ್ಲಿಸಿದ ಮನವಿಯಲ್ಲಿ ಹಣಕಾಸು ಆಯೋಗದಿಂದ ನೇರ ಹಣ ಹಂಚಿಕೆ ಬಗೆಗೆ ಕೇಳಿದೆ."ಎಲ್ಲಾ ರಾಷ್ಟ್ರೀಯ ತೆರಿಗೆ ಆದಾಯದ 1% ಬೆಂಗಳೂರಿನಂತಹ ಮೆಟ್ರೋ ನಗರಗಳಿಗೆ ಹಂಚಿಕೆ ಮಾಡಬೇಕೆಂದು ರಾಜ್ಯವು ಒತ್ತಾಯಿಸಿದೆ" ಎಂದು ಅವರು ಹೇಳಿದರು, ಮುಂದಿನ ನಾಲ್ಕು ವರ್ಷಗಳಲ್ಲಿ ನಗರಕ್ಕೆ 1 ಲಕ್ಷ ಕೋಟಿಗಿಂತ ಹೆಚ್ಚು ಅಗತ್ಯವಿದೆ ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT