ರಾಜ್ಯ

ಕೆಂಪೇಗೌಡರಿಗೂ ನನಗೂ ವಿಶೇಷ ಬಾಂಧವ್ಯವಿದೆ: ಸಚಿವ ಡಿ.ಕೆ ಶಿವಕುಮಾರ್

Shilpa D
ಬೆಂಗಳೂರು: ನಾಡಪ್ರಭು ಕೆಂಪೇಗೌಡರಿಗೂ ಮತ್ತು ನನಗೂ ವಿಶೇಷ ಬಾಂಧವ್ಯವಿದೆ, ಇತಿಹಾಸ ಮತ್ತು ಸಂಬಂಧವಿದೆ, ಆದರೆ ಅದನ್ನು ಇಲ್ಲಿ ಹಂಚಿಕೊಳ್ಳಲು ಬಯಸುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿವಕುಮಾರ್ ಮಾತನಾಡಿದರು. 
ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದಲ್ಲಿರುವ ಕಾರಣ ಶಿವಕುಮಾರ್ ಮತ್ತು ಡಿಸಿಎಂ ಪರಮೇಶ್ವರ್ ಕಾರ್ಯಕ್ರಾಮದಲ್ಲಿ ಭಾಗವಹಿಸಿದ್ದರು
ಕಾರ್ಯಕ್ರಮದಲ್ಲಿ  ಭಾಗವಹಿಸಿದ್ದ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ''ಕೆಂಪೇಗೌಡ ಯಾವುದೇ ಸಮುದಾಯದ ಸ್ವತ್ತಲ್ಲ ಕನಕ, ವಾಲ್ಮೀಕಿ, ಬಸವಣ್ಣ, ಕೆಂಪೇಗೌಡರನ್ನು ಆಯಾ ಜಾತಿಗೆ ಸೀಮಿತವಾಗಿಡುವ ಕೆಲಸ ನಿಲ್ಲಬೇಕು ಎಂದು ಅಭಿಪ್ರಾಯಪಟ್ಟರು. 
ತುಮಕೂಕು ಸ್ಪಟಿಕಪುರ ಸಂಸ್ಥಾನದ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿ ಭಾಗವಹಿಸಿದ್ದರು. 
SCROLL FOR NEXT