ಡಿಕೆ ಶಿವಕುಮಾರ್ 
ರಾಜ್ಯ

ಬಿಳಿಗುಂಡ್ಲು ಸಮೀಪ ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕದ ವಿರೋಧವಿಲ್ಲ: ಡಿಕೆಶಿ

ಕರ್ನಾಟಕದ ಗಡಿಯಲ್ಲಿರುವ ತಮಿಳುನಾಡಿನ ಬಿಳಿಗುಂಡ್ಲು ಬಳಿ ರಾಸಿಮನಲ್ ಸಮೀಪ ತಮಿಳುನಾಡು ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು...

ಬೆಂಗಳೂರು: ಕರ್ನಾಟಕದ ಗಡಿಯಲ್ಲಿರುವ ತಮಿಳುನಾಡಿನ ಬಿಳಿಗುಂಡ್ಲು ಬಳಿ ರಾಸಿಮನಲ್ ಸಮೀಪ ತಮಿಳುನಾಡು ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕದ ವಿರೋಧವಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಂದು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ಬಿಳಿಗುಂಡ್ಲು ಸೇರಿದಂತೆ ಎಲ್ಲಿ ಬೇಕಾದರೂ ಅಣೆಕಟ್ಟು ಕಟ್ಟಲಿ, ಅದಕ್ಕೆ ವಿರೋಧ ವ್ಯಕ್ತಪಡಿಸದೇ ಸಂಪೂರ್ಣ ಸಹಕಾರ ನೀಡುತ್ತೇವೆ. ಸಮುದ್ರಕ್ಕೆ ಹರಿದುಹೋಗುವ ನೀರನ್ನು ಅವರು ಬಳಸಿಕೊಳ್ಳುವುದಕ್ಕೆ ಯಾವುದೇ ವಿರೋಧವಿಲ್ಲ. ಆದರೆ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಸಹಕಾರ ನೀಡಬೇಕು. ಈ ಯೋಜನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಲಾಗಿದ್ದು, ಇದಕ್ಕೆ ತೊಂದರೆ ಮಾಡಬಾರದು ಎಂದು ಅವರು ಮನವಿ ಮಾಡಿದರು.
ಮಂಡ್ಯ ಜಿಲ್ಲೆಯ ಕಬ್ಬು, ಭತ್ತದ ಬೆಳೆಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನೀರು ಹರಿಸುವ ಅಧಿಕಾರ ಪ್ರಾಧಿಕಾರಕ್ಕೆ ಇದೆಯೇ ಹೊರತು ಜಲಸಂಪನ್ಮೂಲ ಇಲಾಖೆಗೆ ಇಲ್ಲ. ಇಲ್ಲಿಯವರೆಗೆ ಅಲ್ಲಿನ ರೈತರು ತಮಗೆ ಬೇಕಾದ ಫಸಲುಗಳನ್ನು ಬೆಳೆಯುತ್ತಿದ್ದರು. ಆದರೆ ಇನ್ನು ಮುಂದೆ ನೀರು ಹರಿಯುವಿಕೆ ಆಧರಿಸಿ ಬೆಳೆ ಬೆಳೆಯಬೇಕಾಗಿರುವುದರಿಂದ ಅವರಿಗೆ ಬೇಕಾದತೆ ಬೆಳೆ ಬೆಳೆಯುವುದಕ್ಕೆ ಸಾಧ್ಯವಾಗುವುದಿಲ್ಲ. ಯಾವ ಸಮಯದಲ್ಲಿ ಯಾವ ಫಸಲನ್ನು ಬೆಳೆಯಬೇಕು ಎಂಬ ಬಗ್ಗೆ ರೈತರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

SCROLL FOR NEXT