ಡಿಕೆ ಶಿವಕುಮಾರ್ 
ರಾಜ್ಯ

ಬಿಳಿಗುಂಡ್ಲು ಸಮೀಪ ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕದ ವಿರೋಧವಿಲ್ಲ: ಡಿಕೆಶಿ

ಕರ್ನಾಟಕದ ಗಡಿಯಲ್ಲಿರುವ ತಮಿಳುನಾಡಿನ ಬಿಳಿಗುಂಡ್ಲು ಬಳಿ ರಾಸಿಮನಲ್ ಸಮೀಪ ತಮಿಳುನಾಡು ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು...

ಬೆಂಗಳೂರು: ಕರ್ನಾಟಕದ ಗಡಿಯಲ್ಲಿರುವ ತಮಿಳುನಾಡಿನ ಬಿಳಿಗುಂಡ್ಲು ಬಳಿ ರಾಸಿಮನಲ್ ಸಮೀಪ ತಮಿಳುನಾಡು ಸರ್ಕಾರ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕದ ವಿರೋಧವಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಇಂದು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ಬಿಳಿಗುಂಡ್ಲು ಸೇರಿದಂತೆ ಎಲ್ಲಿ ಬೇಕಾದರೂ ಅಣೆಕಟ್ಟು ಕಟ್ಟಲಿ, ಅದಕ್ಕೆ ವಿರೋಧ ವ್ಯಕ್ತಪಡಿಸದೇ ಸಂಪೂರ್ಣ ಸಹಕಾರ ನೀಡುತ್ತೇವೆ. ಸಮುದ್ರಕ್ಕೆ ಹರಿದುಹೋಗುವ ನೀರನ್ನು ಅವರು ಬಳಸಿಕೊಳ್ಳುವುದಕ್ಕೆ ಯಾವುದೇ ವಿರೋಧವಿಲ್ಲ. ಆದರೆ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಸಹಕಾರ ನೀಡಬೇಕು. ಈ ಯೋಜನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಲಾಗಿದ್ದು, ಇದಕ್ಕೆ ತೊಂದರೆ ಮಾಡಬಾರದು ಎಂದು ಅವರು ಮನವಿ ಮಾಡಿದರು.
ಮಂಡ್ಯ ಜಿಲ್ಲೆಯ ಕಬ್ಬು, ಭತ್ತದ ಬೆಳೆಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನೀರು ಹರಿಸುವ ಅಧಿಕಾರ ಪ್ರಾಧಿಕಾರಕ್ಕೆ ಇದೆಯೇ ಹೊರತು ಜಲಸಂಪನ್ಮೂಲ ಇಲಾಖೆಗೆ ಇಲ್ಲ. ಇಲ್ಲಿಯವರೆಗೆ ಅಲ್ಲಿನ ರೈತರು ತಮಗೆ ಬೇಕಾದ ಫಸಲುಗಳನ್ನು ಬೆಳೆಯುತ್ತಿದ್ದರು. ಆದರೆ ಇನ್ನು ಮುಂದೆ ನೀರು ಹರಿಯುವಿಕೆ ಆಧರಿಸಿ ಬೆಳೆ ಬೆಳೆಯಬೇಕಾಗಿರುವುದರಿಂದ ಅವರಿಗೆ ಬೇಕಾದತೆ ಬೆಳೆ ಬೆಳೆಯುವುದಕ್ಕೆ ಸಾಧ್ಯವಾಗುವುದಿಲ್ಲ. ಯಾವ ಸಮಯದಲ್ಲಿ ಯಾವ ಫಸಲನ್ನು ಬೆಳೆಯಬೇಕು ಎಂಬ ಬಗ್ಗೆ ರೈತರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT