ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಡ್ಯಾನ್ಸ್ ಬಾರ್ ಮೇಲೆ ದಾಳಿ, 74 ಯುವತಿಯರ ರಕ್ಷಣೆ

ಜಂಟಿ ಪೊಲೀಸ್ ಆಯುಕ್ತ ಬಿಆರ್ ರವಿಕಾಂತೇಗೌಡ ಅವರ ನಿರ್ದೇಶನದ ಮೇರೆಗೆ ಪೊಲೀಸ್ ತಂಡ ಬೆಂಗಳೂರು ನಗರದ ಡ್ಯಾನ್ಸ್ ಬಾರ್ ಮೇಲೆ...

ಬೆಂಗಳೂರು: ಜಂಟಿ ಪೊಲೀಸ್ ಆಯುಕ್ತ ಬಿಆರ್ ರವಿಕಾಂತೇಗೌಡ ಅವರ ನಿರ್ದೇಶನದ ಮೇರೆಗೆ ಪೊಲೀಸ್ ತಂಡ ಬೆಂಗಳೂರು ನಗರದ ಡ್ಯಾನ್ಸ್ ಬಾರ್ ಮೇಲೆ ದಾಳಿ ನಡೆಸಿ 74 ಯುವತಿಯರನ್ನು ರಕ್ಷಣೆ ಮಾಡಿದೆ.
ದಾಳೆ ವೇಳೆ 1.04 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದ್ದು, ಈ ಘಟನೆಗೆ ಸಂಬಂಧಪಟ್ಟಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ವ್ಯಕ್ತಿಗಳನ್ನು ಡ್ಯಾನ್ಸ್ ಬಾರ್‌ನ ವ್ಯವಸ್ಥಾಪಕ ದಿನೇಶ್, ಕ್ಯಾಷಿಯರ್ ದಿನೇಶ್ ಕುಮಾರ್, ರಿಯಾಜುದ್ದೀನ್, ಪ್ರಕಾಶ್ ದತ್ ಜೋಶಿ ಮತ್ತು ಹೆಗೈರಾಜ್ ಜೋಶಿ ಎಂದು ಗುರುತಿಸಲಾಗಿದೆ.
ಬಾರ್ ಸಿಬ್ಬಂದಿ ಗ್ರಾಹಕರನ್ನು ಆಕರ್ಷಿಸಲು ನೃತ್ಯ ಮಾಡುವಂತೆ ಒತ್ತಾಯಿಸುತ್ತಿದ್ದರು. ರಕ್ಷಿಸಿದ ಹುಡುಗಿಯರಲ್ಲಿ ಕೆಲವರು ಸ್ಥಳಿಯರಾಗಿದ್ದು, ಕೆಲವರು ಬೇರೆ ರಾಜ್ಯಕ್ಕೆ ಸೇರಿದವರಾಗಿದ್ದಾರೆ.
ಉದ್ಯೋಗ ಹೆಚ್ಚಿನ ಹಣ ಕೊಡುವ ಅಮಿಷದ ಮೇರೆಗೆ ಇತರ ರಾಜ್ಯಗಳಿಂದ ಯುವತಿಯರನ್ನು ಕರೆತರಲಾಗಿದೆ. ದಾಳಿ ವೇಳೆ ಪೊಲೀಸರು 48 ಗ್ರಾಹಕರನ್ನು ಸಹ ವಶಕ್ಕೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಲಯಾಳಂ ನಟಿ ಮೇಲೆ ಹತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು

ಡಿಕೆಶಿ ಅವಕಾಶ ಕೇಳಿದ್ರು, ಆದ್ರೆ CM ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸ್ಫೋಟಕ ಹೇಳಿಕೆ

ಬೆಳಗಾವಿ ಅಧಿವೇಶನ 2025: ಸುವರ್ಣ ಸೌಧದಲ್ಲೂ'ನಾಟಿ ಕೋಳಿ' ಸದ್ದು, ಆರ್ ಅಶೋಕ್ ಗೆ ಸಿಎಂ ಸಿದ್ದು ಸಲಹೆ!

ಬಳಕೆಯಾಗದ ಬಾರ್‌ ಲೈಸೆನ್ಸ್ ಹರಾಜು ಕುರಿತು ಈ ವಾರ ಅಧಿಸೂಚನೆ ಸಾಧ್ಯತೆ

ಬೆಳಗಾವಿ ಅಧಿವೇಶನ: ವಿಧಾಸಭೆ ಕಲಾಪ ಆರಂಭ; ಸಾಲುಮರದ ತಿಮ್ಮಕ್ಕ ಸೇರಿ ಇತ್ತೀಚಿಗೆ ನಿಧನರಾದ ಗಣ್ಯರಿಗೆ ಸಂತಾಪ

SCROLL FOR NEXT