ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಡ್ಯಾನ್ಸ್ ಬಾರ್ ಮೇಲೆ ದಾಳಿ, 74 ಯುವತಿಯರ ರಕ್ಷಣೆ

ಜಂಟಿ ಪೊಲೀಸ್ ಆಯುಕ್ತ ಬಿಆರ್ ರವಿಕಾಂತೇಗೌಡ ಅವರ ನಿರ್ದೇಶನದ ಮೇರೆಗೆ ಪೊಲೀಸ್ ತಂಡ ಬೆಂಗಳೂರು ನಗರದ ಡ್ಯಾನ್ಸ್ ಬಾರ್ ಮೇಲೆ...

ಬೆಂಗಳೂರು: ಜಂಟಿ ಪೊಲೀಸ್ ಆಯುಕ್ತ ಬಿಆರ್ ರವಿಕಾಂತೇಗೌಡ ಅವರ ನಿರ್ದೇಶನದ ಮೇರೆಗೆ ಪೊಲೀಸ್ ತಂಡ ಬೆಂಗಳೂರು ನಗರದ ಡ್ಯಾನ್ಸ್ ಬಾರ್ ಮೇಲೆ ದಾಳಿ ನಡೆಸಿ 74 ಯುವತಿಯರನ್ನು ರಕ್ಷಣೆ ಮಾಡಿದೆ.
ದಾಳೆ ವೇಳೆ 1.04 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದ್ದು, ಈ ಘಟನೆಗೆ ಸಂಬಂಧಪಟ್ಟಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ವ್ಯಕ್ತಿಗಳನ್ನು ಡ್ಯಾನ್ಸ್ ಬಾರ್‌ನ ವ್ಯವಸ್ಥಾಪಕ ದಿನೇಶ್, ಕ್ಯಾಷಿಯರ್ ದಿನೇಶ್ ಕುಮಾರ್, ರಿಯಾಜುದ್ದೀನ್, ಪ್ರಕಾಶ್ ದತ್ ಜೋಶಿ ಮತ್ತು ಹೆಗೈರಾಜ್ ಜೋಶಿ ಎಂದು ಗುರುತಿಸಲಾಗಿದೆ.
ಬಾರ್ ಸಿಬ್ಬಂದಿ ಗ್ರಾಹಕರನ್ನು ಆಕರ್ಷಿಸಲು ನೃತ್ಯ ಮಾಡುವಂತೆ ಒತ್ತಾಯಿಸುತ್ತಿದ್ದರು. ರಕ್ಷಿಸಿದ ಹುಡುಗಿಯರಲ್ಲಿ ಕೆಲವರು ಸ್ಥಳಿಯರಾಗಿದ್ದು, ಕೆಲವರು ಬೇರೆ ರಾಜ್ಯಕ್ಕೆ ಸೇರಿದವರಾಗಿದ್ದಾರೆ.
ಉದ್ಯೋಗ ಹೆಚ್ಚಿನ ಹಣ ಕೊಡುವ ಅಮಿಷದ ಮೇರೆಗೆ ಇತರ ರಾಜ್ಯಗಳಿಂದ ಯುವತಿಯರನ್ನು ಕರೆತರಲಾಗಿದೆ. ದಾಳಿ ವೇಳೆ ಪೊಲೀಸರು 48 ಗ್ರಾಹಕರನ್ನು ಸಹ ವಶಕ್ಕೆ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Operation Sindoor ವೇಳೆ ಪಾಕಿಸ್ತಾನಕ್ಕೆ ನೆರವು, Azerbaijan ಶಾಕ್ ಕೊಟ್ಟ ಭಾರತ, SCO ಸದಸ್ಯತ್ವಕ್ಕೆ ತಡೆ! ಅಧ್ಯಕ್ಷ Ilham Aliyev ಹೇಳಿದ್ದೇನು?

ಒಂದೂರಿನಲ್ಲಿ ಬಡ ಬ್ರಾಹ್ಮಣನಿದ್ದ ಎಂದೇ ಶುರುವಾಗುತ್ತಿದ್ದ ಕತೆಯನ್ನು ಬದಲಿಸುತ್ತಿರುವವರ್ಯಾರು? (ತೆರೆದ ಕಿಟಕಿ)

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಭೂಕುಸಿತದಲ್ಲಿ ಆರು ಮಂದಿ ಸಾವು; 1,150 ಕ್ಕೂ ಹೆಚ್ಚು ರಸ್ತೆಗಳು ಬಂದ್; Video

'ಉದಾತ್ತ ಹೃದಯ ಮತ್ತು ಸರಳತೆ': ಜನ್ಮದಿನಕ್ಕೆ ಶುಭ ಕೋರಿದ ಶಿವಣ್ಣಗೆ ಧನ್ಯವಾದ ಹೇಳಿದ ನಟ Pawan Kalyan

ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆಗೆ ಪ್ರವಾಹ ಭೀತಿ: ಚೆನಾಬ್, ಝೇಲಂನಲ್ಲಿ ಅಪಾಯದ ಮಟ್ಟ ಮೀರಿದ ನೀರು; ಶಾಲೆಗಳಿಗೆ ರಜೆ, ಹೆದ್ದಾರಿ ಬಂದ್

SCROLL FOR NEXT