ಸಂಗ್ರಹ ಚಿತ್ರ 
ರಾಜ್ಯ

ದೇಶದ ಹೀರೋ ಅಭಿನಂದನ್ ವಾಪಸ್ ಆಗಿದ್ದು ತುಂಬಾ ಖುಷಿಯ ವಿಚಾರ: ಸಿಎಂ ಕುಮಾರಸ್ವಾಮಿ

ಪಾಕ್ ವಶದಲ್ಲಿದ್ದ ಐಎಎಫ್ ವಿಂಗ್ ಕಮಾಂಡರ್ ಅಭಿನಂದನ್ ತವರಿಗೆ ವಾಪಸ್ ಆಗಿದ್ದು, ಅಭಿನಂದನ್ ವಾಪಸಾತಿಗೆ ರಾಜ್ಯ ರಾಜಕೀಯ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪಾಕ್ ವಶದಲ್ಲಿದ್ದ ಐಎಎಫ್ ವಿಂಗ್ ಕಮಾಂಡರ್ ಅಭಿನಂದನ್ ತವರಿಗೆ ವಾಪಸ್ ಆಗಿದ್ದು, ಅಭಿನಂದನ್ ವಾಪಸಾತಿಗೆ ರಾಜ್ಯ ರಾಜಕೀಯ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ವಿಚಾರಾಗಿ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ, 'ನಮ್ಮ ಹೀರೋ ವಿಂಗ್​ ಕಮಾಂಡರ್​​​ ಅಭಿನಂದನ್​​ ವರ್ಧಮಾನ್​​ ಪಾಕಿಸ್ತಾನದಿಂದ ವಾಪಸ್ಸಾಗಿದ್ದು ಸಂತೋಷ ತಂದಿದೆ ಎಂದು ಟ್ವೀಟ್​​​ ಮಾಡಿದ್ದಾರೆ. 
'ಪೈಲಟ್​​ ಅಭಿನಂದನ್​ ಅವರ ಧೈರ್ಯ, ಕ್ಲಿಷ್ಟಕರ ಸಮಯದಲ್ಲೂ ಅವರ ಕಾರ್ಯಬದ್ಧತೆ ಪ್ರಶಂಸನೀಯ. ಭಾರತಾಂಬೆ ಪುತ್ರನ ಕೆಚ್ಚೆದೆಯ ಸಾಹಸಕ್ಕೆ ನಾವು ಹೆಮ್ಮೆ ಪಡುತ್ತೇವೆ. ಇಡೀ ರಾಷ್ಟ್ರವೇ ಅವರ ಶೌರ್ಯಕ್ಕೆ ಸಲಾಂ ಹೊಡೆಯುತ್ತದೆ. ತವರು ನಾಡಿಗೆ ಆಗಮಿಸಿದ ಅಭಿನಂದನ್​ರಿಗೆ ಸ್ವಾಗತ' ಎಂದು ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.
ಅಂತೆಯೇ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ ಪರಮೇಶ್ವರ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅವರೂ ಕೂಡ ಟ್ವೀಟ್ ಮೂಲಕ ಅಭಿನಂದನ್ ಅವರನ್ನು ಸ್ವಾಗತಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT