ಸಾಂದರ್ಭಿಕ ಚಿತ್ರ 
ರಾಜ್ಯ

ಎಲೆಕ್ಟ್ರಿಕ್‌ ವಾಹನ ಚಾರ್ಜಿಂಗ್‌ ಕೇಂದ್ರ ಸ್ಥಾಪನೆಗೆ 4 ಕೋಟಿ ರೂ. ಬಿಡುಗಡೆ

ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್‍ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂಪಾಯಿ ಹಣವನ್ನು ಬೆಸ್ಕಾಂಗೆ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್‍ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂಪಾಯಿ ಹಣವನ್ನು ಬೆಸ್ಕಾಂಗೆ ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಉದ್ಯಾನಗರಿ ಬೆಂಗಳೂರಿನಲ್ಲಿ  ಪರಿಸರ ಸ್ನೇಹಿ ವಾತಾವರಣ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡುತ್ತಿದೆ. ಆದರೆ ಚಾರ್ಜಿಂಗ್ ಕೇಂದ್ರಗಳ ಕೊರತೆಯಿಂದಾಗಿ ಯೋಜನೆ ಇನ್ನೂ ಯಶಸ್ವಿಯಾಗಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಚಾರ್ಜಿಂಗ್ ಕೇಂದ್ರಗಳನ್ನು ಹೆಚ್ಚಿಸಲು ಬೆಸ್ಕಾಂಗೆ ಸೂಚಿಸಿದೆ. ಇದಕ್ಕಾಗಿ ತಕ್ಷಣ 4 ಕೋಟಿ ರೂ. ಅನುದಾನವನ್ನೂ ಬಿಡುಗಡೆ ಮಾಡಿದೆ.
ವಿದ್ಯುತ್ ಸರಬರಾಜು ಕಂಪನಿ ನೀಡಿರುವ ಕ್ರಿಯಾಯೋಜನೆಯಂತೆ ಜಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು 4 ಕೋಟಿ ರೂ.ಗಳನ್ನು ಬೆಸ್ಕಾಂ ಸಂಸ್ಥೆಗೆ 'ಠೇವಣಿ ಕೊಡುಗೆ' ಮಾಡಲು ಕೆಲವು ಷರತ್ತುಗಳೊಂದಿಗೆ ಹಣ ಮಂಜೂರು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಎಲೆಕ್ಟ್ರಿಕ್ ಬ್ಯಾಟರಿ ಚಾಲಿತ ವಾಹನಗಳ ಬ್ಯಾಟರಿಗಳನ್ನು ಬೆಂಗಳೂರು ನಗರ ಮತ್ತು ರಾಜ್ಯಾದ್ಯಂತ ಶೀಘ್ರವಾಗಿ ಚಾರ್ಜಿಂಗ್ ಮಾಡಿಕೊಳ್ಳಲು ಅನುಕೂಲವಾಗುವಂತೆ 100 ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಅನುದಾನ ನೀಡುವಂತೆ ಕೋರಿ ಸಾರಿಗೆ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.  ಇದೀಗ ಹಣಕಾಸು ಇಲಾಖೆ ಅನುದಾನ ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT