ಸಚಿವ ಜಿಟಿ ದೇವೇಗೌಡ 
ರಾಜ್ಯ

ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಶುಲ್ಕ ಶೇ.10 ರಷ್ಟು ಹೆಚ್ಚಳ

2019-20 ನೇ ಸಾಲಿನ ಖಾಸಗಿ ಇಂಜಿನಿಯಿಂಗ್ ಕಾಲೇಜುಗಳ ಪ್ರವೇಶ ಶುಲ್ಕ ವನ್ನು ಶೇ.10 ರಷ್ಟು ಏರಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರು: 2019-20 ನೇ ಸಾಲಿನ ಖಾಸಗಿ ಇಂಜಿನಿಯಿಂಗ್ ಕಾಲೇಜುಗಳ ಪ್ರವೇಶ ಶುಲ್ಕ ವನ್ನು ಶೇ.10 ರಷ್ಟು ಏರಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ.
ಶುಲ್ಕ ಹೆಚ್ಚಳ ಸಂಬಂಧ ನಗರದ ಕುಮಾರಕೃಪ ಅತಿಥಿಗೃಹದಲ್ಲಿ ಸಚಿವ ಜಿ.ಟಿ.ದೇವೇಗೌಡ ಅವರು, ಕಾಮೆಡ್‍ಕೆ ಸೇರಿದಂತೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಆಡಳಿತ ಮಂಡಳಿಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.
ಸಭೆ ಬಳಿಕ ಮಾತನಾಡಿದ ಅವರು, ಈ ಬಾರಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶೇ.15 ರಷ್ಟು ಪ್ರವೇಶ ಶುಲ್ಕ ಏರಿಕೆಗೆ ಒತ್ತಾಯಿಸಿದ್ದವು. ಆದರೆ ಅಷ್ಟೊಂದು ಶುಲ್ಕ ಏರಿಕೆಯಿಂದ ವಿದ್ಯಾರ್ಥಿಗಳಿಗೆ ಪೋಷಕರಿಗೆ ಕಷ್ಟವಾಗಲಿದೆ. ಹೀಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಚರ್ಚಿಸಿ ಇಂಜಿನಿಯರಿಂಗ್ ಪ್ರವೇಶ ಶುಲ್ಕವನ್ನು ಶೇ.15 ರ ಬದಲಿಗೆ ಶೇ.10 ರಷ್ಟು ಏರಿಸಲು ತೀರ್ಮಾನಿಸಲಾಗಿದೆ ಎಂದರು.
2019-20 ನೇ ಸಾಲಿನ  ಮೊದಲ ಹಂತದಲ್ಲಿ 58,800 ರೂ. ಎರಡನೇ ಹಂತದಲ್ಲಿ 65,340 ರೂ.ಶುಲ್ಕ ನಿಗದಿಪಡಿಸಲಾಗಿದೆ. ಹಾಗೂ ಕಾಮೆಡ್‍ಕೆ ವ್ಯಾಪ್ತಿಗೊಳಪಡುವ ಕಾಲೇಜುಗಳಿಗೆ ಮೊದಲ ಹಂತದಲ್ಲಿ 1,43,748ರೂ. ಎರಡನೇ ಹಂತದಲ್ಲಿ  2,1,960 ರೂ. ಶುಲ್ಕ ನಿಗದಿಪಡಿಸಲಾಗಿದೆ ಎಂದು ಅವರು ವಿವರಿಸಿದರು.
ಕಳೆದ ವರ್ಷ ನ್ಯಾಯಮೂರ್ತಿ ಶೈಲೇಶ್ಚಂದ್ರ ಕುಮಾರ್ ಶಿಫಾರಸಿನನ್ವಯ ಶೇ.8 ರಷ್ಟು ಶುಲ್ಕ ಹೆಚ್ಚಿಸಿದ್ದರು. ಈ ಬಾರಿ ಕಾಲೇಜುಗಳು ಯಾವುದೇ ಒತ್ತಡ ಹೇರದೇ , ಸಮಿತಿ ರಚನೆ ಮಾಡದೇ ಇದ್ದರೂ ಶುಲ್ಕವನ್ನು ಶೇ.10 ರಷ್ಟು ಮತ್ತೆ ಹೆಚ್ಚಳ ಮಾಡಲಾಗಿದೆ.  ಈ ಬಾರಿ ಇಂಜಿನಿಯರಿಂಗ್ ಎಲ್ಲಾ ಕೋರ್ಸ್ ಗಳ ಶುಲ್ಕ ಹೆಚ್ಚಳವಾಗಿದ್ದು, ಎರಡು ವರ್ಷದಲ್ಲಿ ಶೇ.18 ರಷ್ಟು ಶುಲ್ಕ ಹೆಚ್ಚಳವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT