ಕಲ್ಲಂಗಡಿ ವ್ಯಾಪಾರ 
ರಾಜ್ಯ

ಹೆಚ್ಚಾಗಿದೆ ಬಿಸಿಲಿನ ದಾಹ; ಹಣ್ಣು, ಎಳನೀರು ಮಾರಾಟಗಾರರಿಗೆ ಬಂಪರ್

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲು ಕಾವು ಏರುತ್ತಿದೆ. ಫೆಬ್ರವರಿ ತಿಂಗಳಿನಲ್ಲಿಯೇ 35 ಡಿಗ್ರಿ ...

ಬೆಂಗಳೂರು; ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲು ಕಾವು ಏರುತ್ತಿದೆ. ಫೆಬ್ರವರಿ ತಿಂಗಳಿನಲ್ಲಿಯೇ 35 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಕಲ್ಲಂಗಡಿ ಹಣ್ಣು, ಎಳನೀರು ವ್ಯಾಪಾರ ಬಿಸಿಲಿಗೆ ಜೋರಾಗಿಯೇ ಸಾಗುತ್ತಿದೆ.
ಸಾಮಾನ್ಯವಾಗಿ ಬೇಸಿಗೆ ಕಾಲ ಕಾಲಿಡುವುದು ಶಿವರಾತ್ರಿ ಮುಗಿದ ಮೇಲೆ. ಮಾರ್ಚ್ 4ರಂದು ಶಿವರಾತ್ರಿಯಿದ್ದು ಅದಕ್ಕೆ ಮೊದಲೇ ಫೆಬ್ರವರಿ ಆರಂಭದಲ್ಲಿಯೇ ಬಿಸಿಲು ಕಾಲಿಟ್ಟಿದ್ದರಿಂದ ಹಣ್ಣು, ಎಳನೀರು ಮಾರಾಟದಲ್ಲಿ ಶೇಕಡಾ 75ರಷ್ಟು ಏರಿಕೆಯಾಗಿತ್ತು. ಮಾರುಕಟ್ಟೆಯಲ್ಲಿ ಒಂದು ಎಳನೀರಿಗೆ 20 ರೂಪಾಯಿಯಿಂದ 35 ರೂಪಾಯಿಗಳವರೆಗೆ ಇದೆ. ಕಲ್ಲಂಗಡಿ ಬೆಲೆ ಕೆಜಿಗೆ 20 ರೂಪಾಯಿ ಇದೆ. ಮುಂದಿನ ತಿಂಗಳು ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ನಾನೀಗ ಎಳನೀರನ್ನು ಕೆಜಿಗೆ 30ರೂಪಾಯಿಗೆ ಮಾರಾಟ ಮಾಡುತ್ತಿದ್ದು ಮುಂದಿನ ತಿಂಗಳು ಅದು 35ರಿಂದ 40 ರೂಪಾಯಿಯಾಗುವ ಸಾಧ್ಯತೆಯಿದೆ. ಎಳನೀರನ್ನು ವಿವಿಧ ಜಿಲ್ಲೆಗಳಿಂದ ತರಿಸಲಾಗುತ್ತದೆ. ಮಂಡ್ಯ, ಮದ್ದೂರು, ದಾವಣಗೆರೆಗಳಿಂದ ಸಗಟು ದರದಲ್ಲಿ 12 ರೂಪಾಯಿಗಳಿಂದ 24 ರೂಪಾಯಿಗಳವರೆಗೆ ತರಿಸಲಾಗುತ್ತದೆ. ಪ್ರತಿದಿನ 150ರಿಂದ 200 ಎಳನೀರಿನವರೆಗೆ ಮಾರಾಟ ಮಾಡುತ್ತೇವೆ ಎನ್ನುತ್ತಾರೆ ಸಿಬಿಐ ವ್ಯಾಪಾರಿಗಳಾದ  ಆರ್ಮುಗಂ ಮತ್ತು ಚನ್ನೇ ಗೌಡ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT