ರಾಜ್ಯ

ಮನೆ ಬಾಗಿಲಿಗೆ ಸರ್ಕಾರಿ ಸೇವೆ; ಮುಖ್ಯಮಂತ್ರಿ ಕುಮಾರಸ್ವಾಮಿ

Sumana Upadhyaya
ಬೆಂಗಳೂರು: ರಾಜ್ಯ ಸರ್ಕಾರ ವಿನೂತನ ಯೋಜನೆಯಾದ “ಜನ ಸೇವಕ - ನಾಗರಿಕರ ಮನೆಬಾಗಿಲಿಗೆ ಸರ್ಕಾರದ ಸೇವೆಗಳು” ಯೋಜನೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರಿನ ಬಾಗಲಗುಂಟೆಯಲ್ಲಿ ಮನೆ ಮನೆ ತೆರಳಿ ಚಾಲನೆ ನೀಡಿದರು.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಯೋಜನೆಯನ್ನು ಮುಖ್ಯಮಂತ್ರಿಗಳು ಸ್ಥಳೀಯರೊಬ್ಬರ ಮೋಟಾರ್  ಸೈಕಲ್ ಮೇಲೆ ಕುಳಿತು ಹಲವಾರು ಮನೆಗಳಿಗೆ ತೆರಳಿ ಯೋಜನೆಯ ಲಾಭ ಪಡೆಯುವಂತೆ ಕೋರಿದರು.
ಈ ಸಂದರ್ಭದಲ್ಲಿ ನಾಗರಿಕರೊಂದಿಗೆ ಮಾತನಾಡಿದ ಅವರು, “ಈ ಯೋಜನೆಯಡಿ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬಿ.ಬಿ.ಎಂ.ಪಿ ಖಾತಾ ಸೇವೆಗಳು, ಹಿರಿಯ ನಾಗರಿಕರ ಕಾರ್ಡ್ ಮತ್ತು ಆರೋಗ್ಯ ಕಾರ್ಡ್ ಮುಂತಾದ ಸೇವೆಗಳನ್ನು ಪಡೆಯಬಹುದಾಗಿದ್ದು, ಸಹಾಯವಾಣಿ ಸಂಖ್ಯೆ: 080-44554455 ದೂರವಾಣೆ ಕರೆ ಮಾಡಿದರೆ ಸಾಕು ನಾಗರಿಕರು ಕೋರಿದ ಸೇವೆಗಳನ್ನು ಸಮಯ ಬದ್ಧವಾಗಿ ಹಾಗೂ ಗುಣಾತ್ಮಕವಾಗಿ ವಿಲೇವಾರಿ ಮಾಡಲಾಗುವುದು” ಎಂದು ತಿಳಿಸಿದರು.
SCROLL FOR NEXT