ರಾಜ್ಯ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಸಂಬಂಧಿಯನ್ನೇ ಇರಿದು ಕೊಂದ!

Raghavendra Adiga
ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಸಂಬಂಧಿಗಳ ನಡುವೆ ಪ್ರಾರಂಭವಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯ ಕಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಿನಂಗಡಿಯಲ್ಲಿ ನಡೆದಿದೆ.

ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ನಡೆದ ಘಟನೆಯಲ್ಲಿ ಯಶವಂತ(19)  ಎಂಬುವವನು ಹತ್ಯೆಯಾಗಿದ್ದಾನೆ. ಈತ ಮೂಲತಃ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಮೋನಪ್ಪ ಎನ್ನುವವರ ಪುತ್ರನೆನ್ನಲಾಗಿದ್ದು  ಆನಂದ ವಗ್ಗ ಎಂಬಾತ ಚೂರಿ ಇರಿದು ಹತ್ಯೆ ಮಾಡಿದ್ದಾನೆ.

ಚೂರಿ ಇರಿತದಿಂದ ಗಂಭೀರ ಗಾಯಗೊಂಡು ರಾಷ್ಟ್ರೀಯ ಹೆದ್ದಾರಿಯ ಪಕ್ಕ ಬಿದ್ದಿದ್ದ ಯಶವಂತನನ್ನು ರಿಕ್ಷಾ ಚಾಲಕ ಫಾರೂಕ್ ಹಾಗೂ ಉಪ್ಪಿನಂಗಡಿ ಪೋಲೀಸ್ ಸಿಬ್ಬಂದಿಗಳು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದರು. ಆ ಮಾರ್ಗದ ನಡುವೆ ಆತ ಕೊನೆಯುಸಿರೆಳೆದಿದಾನೆ.

ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SCROLL FOR NEXT