ಸಿಲಿಕಾನ್ ಸಿಟಿಯಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ ವೀರಯೋಧ #ಅಭಿನಂದನ್_ಮೀಸೆ 
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ ವೀರಯೋಧ #ಅಭಿನಂದನ್ #ಮೀಸೆ

ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರ ಮೀಸೆ ಇದೀಗ ದೇಶಾದ್ಯಂತ ಹೊಸ ಟ್ರೆಂಡ್ ಸೃಷ್ಟಿ ಮಾಡುತ್ತಿದ್ದು, ಇದೀಗ ಸಿಲಿಕಾನ್ ಸಿಟಿಗೂ ಅಭಿನಂದನ್ ಮೀಸೆ ಶೈಲಿ ಕಾಲಿಟ್ಟಿದೆ.

ಬೆಂಗಳೂರು: ಪಾಕಿಸ್ತಾನದ ಎಫ್ 16 ಯುದ್ಧ ವಿಮಾನವನ್ನು ಹೊಡೆದುರುಳಿಸಿ, ಪಾಕ್ ನೆಲದಲ್ಲೇ ಪಾಕಿಸ್ತಾನಿ ಯೋಧರ ಪ್ರಶ್ನೆಗಳಿಗೆ ದಿಟ್ಟ ಉತ್ತರ ನೀಡಿದ್ದ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರ ಮೀಸೆ ಇದೀಗ ದೇಶಾದ್ಯಂತ ಹೊಸ ಟ್ರೆಂಡ್ ಸೃಷ್ಟಿ ಮಾಡುತ್ತಿದ್ದು, ಇದೀಗ ಸಿಲಿಕಾನ್ ಸಿಟಿಗೂ ಅಭಿನಂದನ್ ಮೀಸೆ ಶೈಲಿ ಕಾಲಿಟ್ಟಿದೆ.
ಅಭಿನಂದನ್ ವರ್ತಮಾನ್ ಅವರ ಧೈರ್ಯ, ಸಾಹಸವನ್ನು ದೇಶದ ಜನತೆ ಮೆಚ್ಚಿಕೊಂಡಿದ್ದು, ಈಗ ಅವರ ಮೀಸೆಯೂ ಜನರ ಪ್ರೀತಿಗೆ ಕಾರಣವಾಗಿದೆ. ಈ ಹಿಂದೆ ಇದೇ ಅಭಿನಂದನ್ ಮೀಸೆಯನ್ನು ಪಾಕಿಸ್ತಾನದ ನಟಿ ವೀಣಾ ಮಲಿಕ್ ಸಹ ನಾನು ಇದುವರೆಗೂ ಈ ರೀತಿಯ ಮೀಸೆಯನ್ನು ಎಲ್ಲೂ ನೋಡಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. 
ಅಭಿನಂದನ್ ಅವರನ್ನು ಪಾಕಿಸ್ತಾನದ ವಶಕ್ಕೆ ಪಡೆದಾಗ ಪಾಕ್ ಪರ ಮಾತನಾಡಿ ಟ್ರೋಲ್ ಗೊಳಗಾಗಿದ್ದ ವೀಣಾ ಮಲಿಕ್ ನಂತರ, ಅಭಿನಂದನ್ ಮೀಸೆಯ ಬಗ್ಗೆಯೂ ಕಾಮೆಂಟ್ ಮಾಡಿದ್ದರು. ಇದೀಗ ಇದೇ ಮೀಸೆ ಬೆಂಗಳೂರಿನಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ್ದು, ಸಿಲಿಕಾನ್ ಸಿಟಿಯ ಯುವಕರು ಈ ಹೊಸ ಮಾದರಿಯ ಮೀಸೆಗೆ ಮಾರು ಹೋಗಿದ್ದಾರೆ. ಬೆಂಗಳೂರಿನ ಹಲವು ಬಾರ್ಬರ್ ಶಾಪ್ ಗಳಲ್ಲಿ ಯುವಕರು ಕೇಳಿ ಕೇಳಿ ಇದೇ ಮೀಸೆಯ ಶೈಲಿ ಮಾಡಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT