ಅಂಚೆ ಇಲಾಖೆ ಸಿಬ್ಬಂದಿ 
ರಾಜ್ಯ

ಬೆಂಗಳೂರು: 25 ಲಕ್ಷ ಋಣಮುಕ್ತ ಪತ್ರ ರವಾನೆ ಕಾರ್ಯದಲ್ಲಿ ಅಂಚೆ ಇಲಾಖೆ ಬ್ಯುಸಿ

ವಾರದೊಳಗೆ ಫಲಾನುಭವಿ ರೈತರಿಗೆ 25 ಲಕ್ಷ ಋಣಮುಕ್ತ ಪತ್ರ ತಲುಪಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿರುವುದರಿಂದ ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿರುವ ಅಂಚೆ ಕಚೇರಿಯ ಸಿಬ್ಬಂದಿಗಳು ಗುರುವಾರದಿಂದ ಬಿಡುವಿಲ್ಲದಂತೆ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು:ವಾರದೊಳಗೆ ಫಲಾನುಭವಿ ರೈತರಿಗೆ 25 ಲಕ್ಷ  ಋಣಮುಕ್ತ ಪತ್ರ ತಲುಪಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿರುವುದರಿಂದ ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿರುವ ಅಂಚೆ ಕಚೇರಿಯ ಸಿಬ್ಬಂದಿಗಳು ಗುರುವಾರದಿಂದ  ಬಿಡುವಿಲ್ಲದಂತೆ ಕೆಲಸ ಮಾಡುತ್ತಿದ್ದಾರೆ.

ಮಾರ್ಚ್ 5 ರೊಳಗೆ ಈ ಕಾಗದ ಪತ್ರಗಳನ್ನು ಫಲಾನುಭವಿಗಳಿಗೆ ರವಾನಿಸುವಂತೆ  ಸರ್ಕಾರ ಗಡವು ವಿಧಿಸಿರುವುದರಿಂದ ಸಿಬ್ಬಂದಿಗಳು ಕಾಗದದ ಒಳಗೆ ಪತ್ರ ಸೇರಿಸಿ, ಅವುಗಳಿಗೆ ಸ್ಟಾಂಪ್ ಹಾಕಿ, ಪ್ರದೇಶವಾರು ವಿಂಗಂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಎಲ್ಲಾ ರೈತರಿಗೆ ನೀಡಲಾಗುತ್ತಿರುವ ಒಂದು ಪೇಜಿನ ಈ ಪತ್ರದಲ್ಲಿ ಅವರಿಗೆ ಈ ಯೋಜನೆ ಘೋಷಿಸಿರುವುದಾಗಿ ಮುಖ್ಯಮಂತ್ರಿ ವಿವರಿಸಿದ್ದಾರೆ. 2018 ಜುಲೈ 5 ರಂದು ಮೊದಲ ಬಜೆಟ್ ಮಂಡನೆ ವೇಳೆಯಲ್ಲಿ ಮುಖ್ಯಮಂತ್ರಿ 34 ಸಾವಿರ ಕೋಟಿ ರೂ. ಮೊತ್ತದ ಸಾಲ ಮನ್ನಾ ಘೋಷಣೆ ಮಾಡಿದ್ದರು.
ನಂತರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾಲ ಮನ್ನಾ ಸೇರಿ ಇದನ್ನು 45 ಸಾವಿರ ಕೋಟಿ ರೂ. ಗೆ ಏರಿಕೆ ಮಾಡಲಾಗಿತ್ತು. ಇದರಿಂದಾಗಿ 44. 89 ಲಕ್ಷ ರೈತರಿಗೆ ಅನುಕೂಲವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ನಿಗದಿತ ಅವಧಿಯಲ್ಲಿ ಈ ಕಾರ್ಯ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ ಎಂದು ಬೆಂಗಳೂರು ವಲಯದ ಪೋಸ್ಟ್ ಮಾಸ್ಟರ್ ಜನರಲ್  ಸಿ.ಎ. ವರ್ಮಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT