ಸಂಗ್ರಹ ಚಿತ್ರ 
ರಾಜ್ಯ

ವಿಧಾನಸೌಧದಲ್ಲಿ ಚಿತ್ರೀಕರಣಕ್ಕೆ ಅವಕಾಶ ಕೊಡಿಸೋದಾಗಿ ವಂಚನೆ: ಒಂದೇ ಕುಟುಂಬದ ನಾಲ್ವರ ವಿರುದ್ಧ ದೂರು

ವಿಧಾನಸೌಧದ ಒಳಗೆ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸಿಕೊಡುವುದಾಗಿ ನಂಬಿಸಿ ವಂಚಿಸಿರುವ ಒಂದೇ ಕುಟುಂಬದ ನಾಲ್ವರ ವಿರುದ್ಧ ಬೆಂಗಳೂರು ಬನಶಂಕರಿ ಪೋಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ವಿಧಾನಸೌಧದ ಒಳಗೆ ಚಿತ್ರೀಕರಣಕ್ಕೆ ಅವಕಾಶ ಕಲ್ಪಿಸಿಕೊಡುವುದಾಗಿ ನಂಬಿಸಿ ವಂಚಿಸಿರುವ ಒಂದೇ ಕುಟುಂಬದ ನಾಲ್ವರ ವಿರುದ್ಧ ಬೆಂಗಳೂರು ಬನಶಂಕರಿ ಪೋಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಪ್ರಧಾನ ಆರೋಪಿ ಅನುರಾಗ್ (32) ಎಂದು ಗುರುತಿಸಲಾಗಿದ್ದು ಈತ ಕೆಆರ್ ರಸ್ತೆಯಲ್ಲಿ ಫೋಟೋ ಸ್ಟುಡಿಯೋ ಒಂದನ್ನು ನಡೆಸುತ್ತಿದ್ದಾನೆ.ಅವರ ತಂದೆ ರಾಜೇಶ್ (55) ವಿಧಾನಸೌಧದಲ್ಲಿ ಕಛೇರಿ ಹೊಂದಿದ್ದಾರೆ, ಅದರಿಂದ ಸುಲಭವಾಗಿ ವಿಧಾನಸೌಧದೊಳಗೆ ಚಿತ್ರೀಕರಿಸಲು ಅನುಮತಿ ಸಿಗಲಿದೆ ಎಂದು ಈತ ಮುಗ್ದ ಜನರನ್ನು ನಂಬಿಸಿ ಲಕ್ಷಗಟ್ಟಲೆ ಹಣ ಪಡೆಯುತ್ತಿದ್ದ. ಡಾಕ್ಯುಮೆಂಟರಿ ತಯಾರಿಸುವ ಚಿತ್ರ ನಿರ್ಮಾಪಕರು ಇವನ ಮುಖ್ಯ ಟಾರ್ಗೆಟ್ ಆಗಿರುತ್ತಿದ್ದರು ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.
ಚಿತ್ರ ನಿರ್ಮಾಪಕ ಜೋಡಿಯಾಗಿದ್ದ ಸುನೀತಾ ಮತ್ತು ಭಾಸ್ಕರ್, ಅನುರಾಗ್ ವಿರುದ್ಧ ಪೋಲೀಸರಿಗೆ ದೂರಿತ್ತಿದ್ದರು. ಅವರು ಅದಾಗಲೇ ಅನುರಾಗ್ ಗೆ ಎಂಟು ಲಕ್ಷ ರು. ಪಾವತಿಸಿದ್ದು ಆತ ಅವರಲ್ಲಿ ತಾನೊಬ್ಬ ಸ್ಮಾರ್ಟ್ ಸಿಟಿ ಪ್ರಾಜಕ್ಟ್ ನ ಸಿಇಒ ಎಂದು ಪರಿಚಯಿಸಿಕೊಂಡಿದ್ದ.  ಅಲ್ಲದೆ ಅವರಿಗೆ ನಂಬಿಕೆ ಮೂಡುವಂತೆ ಮಾಡಲು ಆರೋಪಿ ತಾನಿದ್ದ ಮನೆಗೆ ಭೇಟಿ ಕೊಡುವಂತೆ ಸಹ ಸೂಚಿಸಿದ್ದ.  ಹಾಗೆ ಸುನೀತಾ, ಭಸ್ಕರ್ ಅವರಿಂದ ಎಂಟು ಲಕ್ಷ ಪಡೆದ ಬಳಿಕ ಅನುರಾಗ್ ಅವರನ್ನು ನಿರ್ಲಕ್ಷಿಸಲು ಪ್ರಾರಂಭಿಸಿದ. ಅಲ್ಲದೆ ಅವರಿಗೆ ತಮ್ಮ ಯೋಜನೆ ಸಂಪೂರ್ಣವಾಗುವ ಬಗ್ಗೆ ಅನುಮಾನ ಮೂಡಿತ್ತು.
"ನಾವು ಈಗ  ಸತ್ಯದ ಪರಿಶೀಲನೆಯಲ್ಲಿ ತೊಡಗಿದ್ದೇವೆ,ನಾವೀಗ ಅನುರಾಗ್ ನಿಂದ ಹೇಳಿಕೆ ಪಡೆಯಬೇಕಾಗಿದ್ದು ಆ ಹೇಳಿಕೆಯ ಆಧಾರದಲ್ಲಿ ಆರೋಪಿಗಳ ವಿರುದ್ಧ ಕ್ರಮ ಜರುಗಿಸುತ್ತೇವೆ. ಇದುವರೆಗೆ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ" ಪೋಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್