ಚ್. ಡಿ. ಕುಮಾರಸ್ವಾಮಿ 
ರಾಜ್ಯ

ಇಂಗ್ಲೀಷ್ ಅಥವಾ ಕನ್ನಡ, ಶೈಕ್ಷಣಿಕ ಮಾಧ್ಯಮ ಆಯ್ಕೆ ಪೋಷಕರಿಗೆ ಬಿಟ್ಟದ್ದು: ಕುಮಾರಸ್ವಾಮಿ

ಮುಂದಿನ ಶೈಕ್ಷಣಿಕ ವರ್ಷದಿಂದ 1,000 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸುವ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ ಮಕ್ಕಳು ಇಂಗ್ಲೀಷ್ ಅಥವಾ ಕನ್ನಡ, ಯಾವ ಮಾದ್ಯಮದಲ್ಲಿ....

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ 1,000 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸುವ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ ಮಕ್ಕಳು ಇಂಗ್ಲೀಷ್ ಅಥವಾ ಕನ್ನಡ, ಯಾವ ಮಾದ್ಯಮದಲ್ಲಿ ಕಲಿಯಬೇಕೆಂದು ಪೋಷಕರು ನಿರ್ಧರಿಸಲಿದ್ದಾರೆ ಎಂದು  ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ವಿದಾನ ಸೌಧದಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಕುಮಾರಸ್ವಾಮಿ ಒಂದೇ ಶಾಲೆಯಲ್ಲಿ ಬೇರೆ ಬೇರೆ ಮಾದ್ಯಮಗಳಿರಲಿದೆ. ಕನ್ನಡ ಭಾಷೆ ಹೊರತು ಇತರೆ ವಿಷಯಗಳನ್ನು ಇಂಗ್ಲೀಷ್ ನಲ್ಲಿ ಕಲಿಸಲಾಗುತ್ತದೆ. ಇನ್ನು ಮಕ್ಕಳು ಯಾವ ಮಾದ್ಯಮದಲ್ಲಿ ಕಲಿಯಬೇಕೆನ್ನುವುದನ್ನು ಪೋಷಕರ ಆಯ್ಕೆ ಆಗಿರಲಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಕಳಪೆ ಫಲಿತಾಂಶ ಬರುತ್ತಿರುವ ಸಂಬಂಧ  ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಸಹ ದಿನದಿನಕ್ಕೆ ಕ್ಷೀಣಿಸುತ್ತಿದೆ. ಈ ಹಿಂದೆ ಕನ್ನಡ ಶಾಲೆಗಳಲ್ಲಿ 200 ರಷ್ಟಿದ್ದ ಮಕ್ಕಳ ಸಂಖ್ಯೆ ಈಗ ಕೇವಲ 14 ಕ್ಕೆ ಇಳಿದಿದೆ ಎಂದು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
"ಈ ಶಾಲೆಗಳಲ್ಲಿ ಮೊದಲು ಅಧ್ಯಯನ ಮಾಡಿದ ಮಕ್ಕಳ ಪಾಲಕರು ಖಾಸಗಿ ಇಂಗ್ಲೀಷ್ ಮಾಧ್ಯಮ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ದಾಖಲು ಮಾಡಲು ಸುಮಾರು 30,000 ಪಾವತಿಸುತ್ತಿದ್ದಾರೆ. ಇಂತಹಾ ಪೋಷಕರು ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾದ್ಯಮ ಪ್ರಾರಂಭಕ್ಕೆ ಒತ್ತಾಯಿಸುತ್ತಿದ್ದಾರೆ." ಅವರು ಹೇಳಿದ್ದಾರೆ. ಕಳೆದ 10 ವರ್ಷಗಳಲ್ಲಿ ಖಾಸಗಿ ಶಾಲೆಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯು ಹೆಚ್ಚಿದೆ ಎಂದು ಕೆ. ಮರಳುಸಿದ್ದಪ್ಪ ಸೇರಿ  ಇತರ ತಜ್ಞರು ಹೇಳಿದ್ದಾರೆ.
ಹೀಗೆ ಮುಂದುವರಿದರೆ ಅನೇಕ ಸರ್ಕಾರಿ ಶಾಲೆಗಳು ಶೀಘ್ರವಾಗಿ ಮುಚ್ಚುವ ಸಾಧ್ಯತೆ ಇದೆ.ಎಂದು ತಜ್ಞರು ಭಾವಿಸುತ್ತಾರೆ. ರಾಜ್ಯದಲ್ಲಿ  ಸರ್ಕಾರಿ ಶಾಲೆಗಳ ಮಾನದಂಡಗಳನ್ನು ಸುಧಾರಿಸಲು  ಸರ್ಕಾರ ಪ್ರಯತ್ನಿಸಿದೆ ಎಂದು ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT