ಬೆಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲದ ಯಂಟಗಾನಹಳ್ಳಿ ಬಸ್ನಿಲ್ದಾಣದ ಸಮೀಪ ಅಪಘಾತ ಸಂಭವಿಸಿದ್ದು, ಬಸ್ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಬಸ್ ಕೆಂಪೇಗೌಡ ಬಸ್ ನಿಲ್ದಾಣದಿಂದ ರಾತ್ರಿ 10:20ಕ್ಕೆ 32 ಪ್ರಯಾಣಿಕರೊಂದಿಗೆ ಮಣಿಪಾಲ್ ಗೆ ಕೆಎಸ್ ಆರ್ ಟಿಸಿ ಐರಾವತ ಬಸ್ ಹೊರಟಿತ್ತು. ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ಅತಿ ವೇಗವಾಗಿ ಬಂಡ ಸ್ಕಾರ್ಪಿಯೋ ಕಾರು ಡಿವೈಡರ್ ಡಿಕ್ಕಿ ಹೊಡೆಗು ನಂತರ ಬಸ್ ಗೆ ಗುದ್ದಿದೆ.
ಬೆಂಗಳೂರಿನ ನಾಯಂಡಹಳ್ಳಿಯ ಪಂತರಪಾಳ್ಯದವರಾದ ಸ್ಕಾರ್ಪಿಯೋ ಚಾಲಕ ಏಳುಮಲೈ(36), ಗೀತಾ(10), ಕಮಲಾ(35), ಕಿರಣ್(13), ಗಿರಿಧರ್(14) ಮೃತರು. ಬಸ್ನಲ್ಲಿದ್ದ ಕೆಲವರಿಗೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಗೊಂಡವರಿಗೆ ನೆಲಮಂಗಲ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ನೆಲಮಂಗಲ ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ನೆಲಮಂಗಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.