ಸಂಸದ ಪ್ರತಾಪ್ ಸಿಂಹರಿಂದ ರೈಲಿಗೆ ಹಸಿರು ನಿಶಾನೆ 
ರಾಜ್ಯ

ಮೈಸೂರು-ಕಾಚಿಗೂಡ ಎಕ್ಸ್ ಪ್ರೆಸ್‍ ರೈಲಿಗೆ ಸಂಸದ ಪ್ರತಾಪ್ ಸಿಂಹ ಹಸಿರು ನಿಶಾನೆ

ಕಾಚಿಗೂಡ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ಬೆಂಗಳೂರು ಎಕ್ಸ್ ಪ್ರೆಸ್‍ ರೈಲು ಸೇವೆಯನ್ನು ನೈರುತ್ಯ ರೈಲ್ವೆ ಮಂಗಳವಾರದಿಂದ ಮೈಸೂರಿಗೆ ವಿಸ್ತರಿಸಿದೆ.

ಮೈಸೂರು: ಕಾಚಿಗೂಡ- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್ಆರ್) ಬೆಂಗಳೂರು ಎಕ್ಸ್ ಪ್ರೆಸ್‍ ರೈಲು ಸೇವೆಯನ್ನು ನೈರುತ್ಯ ರೈಲ್ವೆ ಮಂಗಳವಾರದಿಂದ  ಮೈಸೂರಿಗೆ ವಿಸ್ತರಿಸಿದೆ.

ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಂಗಳವಾರ ಮೈಸೂರು-ಕೆಎಸ್ಆರ್ ಬೆಂಗಳೂರು-ಕಾಚಿಗೂಡ (ಹೈದರಾಬಾದ್) ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದರು.

ಈ  ಸಂದರ್ಭದಲ್ಲಿ ಮಾತನಾಡಿದ ಅವರು, ಹೈದರಾಬಾದ್‍ಗೆ ಪ್ರಯಾಣಿಸುವ ಸ್ಥಳೀಯ ವ್ಯಾಪಾರಿಗಳು, ಅರಮನೆ ನಗರಿ ಮತ್ತು ಹೈದರಾಬಾದ್‍ಗೆ ಭೇಟಿ ನೀಡುವ ಪ್ರವಾಸಿಗರ ಬಹುದಿನಗಳ ಬೇಡಿಕೆ ಈ  ಸೇವೆಯಿಂದ ಈಡೇರಿದೆ ಎಂದು ಹೇಳಿದ್ದಾರೆ.

ಈ ರೈಲಿನಲ್ಲಿ ಒಟ್ಟು 24 ಬೋಗಿಗಳಿದ್ದು,  ಮೊದಲ ದರ್ಜೆಯ ಒಂದು ಎಸಿ ಬೋಗಿ, ಎರಡನೇ ದರ್ಜೆಯ ಎರಡು ಎಸಿ ಬೋಗಿಗಳು, ಮೂರು ಸ್ತರದ  ನಾಲ್ಕು ಎಸಿ ಬೋಗಿಗಳು, 12 ಸ್ಲೀಪರ್ ಬೋಗಿಗಳು, ಮೂರು ಸಾಮಾನ್ಯ ಬೋಗಿಗಳನ್ನು  ಒಳಗೊಂಡಿರುತ್ತದೆ.

ಈ ರೈಲು ಕೆಎಸ್ಆರ್ ಬೆಂಗಳೂರು-ಮೈಸೂರು ನಡುವೆ ಎಕ್ಸ್ ಪ್ರೆಸ್‍  ಆಗಿ ಸಂಚರಿಸಲಿದ್ದು, ಕೆಎಸ್ಆರ್ ಬೆಂಗಳೂರು-ಕಾಚಿಗೂಡ ನಡುವೆ ಸೂಪರ್ ಫಾಸ್ಟ್ ಎಕ್ಸ್  ಪ್ರೆಸ್‍ ಆಗಿ ಸಂಚರಿಸಲಿದೆ.
ಮೈಸೂರಿನಿಂದ ಮಧ್ಯಾಹ್ನ 2.45 ಕ್ಕೆ ಹೊರಡಲಿರುವ ರೈಲು ಕೆಎಸ್ಆರ್ ಬೆಂಗಳೂರು ನಿಲ್ದಾಣವನ್ನು ಸಂಜೆ 6.20 ಕ್ಕೆ ತಲುಪಲಿದೆ. ಅದೇ ರೀತಿ  ಕೆ.ಎಸ್.ಆರ್ ಬೆಂಗಳೂರು ನಿಲ್ದಾಣದಿಂದ ಬೆಳಿಗ್ಗೆ 6.40ಕ್ಕೆ ಹೊರಡಲಿರುವ ರೈಲು ಮೈಸೂರು ನಿಲ್ದಾಣವನ್ನು 9.40ಕ್ಕೆ ತಲುಪಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT