ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಮೊಗ್ಗ; ಮಂಗನ ಜ್ವರಕ್ಕೆ ಸಾಗರ ತಾಲ್ಲೂಕಿನಲ್ಲಿ 4 ಮಂದಿ ಬಲಿ

ಮಾರ್ಚ್ 1ರಿಂದ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಮಂಗನ ಜ್ವರದಿಂದ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಸಾಗರ...

ಶಿವಮೊಗ್ಗ; ಮಾರ್ಚ್ 1ರಿಂದ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಮಂಗನ ಜ್ವರದಿಂದ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಸಾಗರ ತಾಲ್ಲೂಕಿನ ಅರಲಗೋಡು ಅರಣ್ಯ ಪ್ರದೇಶದ ಸುತ್ತಮುತ್ತ ಇದು ಪತ್ತೆಯಾಗಿದೆ. ಕಳೆದ ಜನವರಿಯಿಂದ ಜಿಲ್ಲೆಯಲ್ಲಿ 10 ಮಂದಿ ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ತೀರ್ಥಹಳ್ಳಿ ಅರಣ್ಯ ಪ್ರದೇಶಕ್ಕೆ ಹೋಲಿಸಿದರೆ ಅರಲಗೋಡು ಅರಣ್ಯ ಪ್ರದೇಶದಲ್ಲಿ ಮಂಗನ ಜ್ವರ ಕಾಯಿಲೆ ತೀವ್ರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ. ಅರಣ್ಯದ ಪರ್ವತ ಪ್ರದೇಶ ಸುತ್ತಮುತ್ತ ವಾಸಿಸುತ್ತಿರುವ ಜನರ ಮೇಲೆ ಇದು ತೀವ್ರ ಪರಿಣಾಮ ಬೀರುತ್ತಿದೆ. ಗಾಳಿಯಿಂದ ಸೋಂಕು ಜನವಸತಿ ಪ್ರದೇಶಗಳಿಗೆ ಅರಣ್ಯಗಳಿಂದ ಬೀಸಿ ಜನರು ಸೋಂಕಿಗೆ ತುತ್ತಾಗುತ್ತಾರೆ ಎಂದು ಹೇಳಿದರು.
ಕ್ಯಾಸನೂರು ಅರಣ್ಯ ಕಾಯಿಲೆ ಕಾಣಿಸಿಕೊಂಡ ನಂತರ 19 ಮಂಗಗಳಲ್ಲಿ ಸೋಂಕು ತಗುಲಿರುವುದು ವರದಿಯಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೀಟನಾಶಕ ಮತ್ತು ರಾಸಾಯನಿಕಗಳನ್ನು ಸಿಂಪಡಿಸುತ್ತಿದೆ ಎಂದು ಡಾ ಸುರಗಿಹಳ್ಳಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT