ಡಿ.ಕೆ. ಶಿವಕುಮಾರ್ 
ರಾಜ್ಯ

ತೆರಿಗೆ ವಂಚನೆ ಪ್ರಕರಣ: ಡಿಕೆಶಿ ಖುಲಾಸೆ ಪ್ರಶ್ನಿಸಿ ಐಟಿ ಇಲಾಖೆಯಿಂದ ಹೈಕೋರ್ಟ್‌ಗೆ ಮೊರೆ

ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧದ ತೆರಿಗೆ ವಂಚನೆಗಳಿಗೆ ಸಂಬಂಧಿಸಿ ಮೂರು ಪ್ರಕರಣಗಳನ್ನು ವಿಶೇಷ ನ್ಯಾಯಾಲಯ....

ಬೆಂಗಳುರು: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧದ  ತೆರಿಗೆ ವಂಚನೆಗಳಿಗೆ ಸಂಬಂಧಿಸಿ ಮೂರು ಪ್ರಕರಣಗಳನ್ನು ವಿಶೇಷ ನ್ಯಾಯಾಲಯ ಮೊನ್ನೆ ವಜಾಗೊಳಿಸಿದ ಬೆನ್ನಲ್ಲೇ ಕೆಳ ನ್ಯಾಯಾಲಯದ ತೀರ್ಪು ಪ್ರಶ್ನಿಸಿಐಟಿ ಇಲಾಖೆ  ಹೈಕೋರ್ಟ್ ಮೊರೆ ಹೋಗಿದೆ.
ಐಟಿ ಇಲಾಖೆಯು ಸಚಿವ ಶಿವಕುಮಾರ್ ಅವರ ವಿರುದ್ಧ ಹೈಕೋರ್ಟ್ ನಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ. 2019 ರ ಫೆಬ್ರವರಿ 28ರ ತೀರ್ಪಿನ ವಿರುದ್ಧ ಮೂರು ಪ್ರತ್ಯೇಕ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗಿದೆ.
ಸಚಿವ ಡಿಕೆಡಿ ಅವರಿಂದ ತೆರಿಗೆ ವಂಚನೆ ನಡೆದಿದೆ ಎಂದು ಆರೋಪಿಸಿರುವ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆದಾಗ ಸಚೊವರು ಕಾಗದ ಪತ್ರಗಳನ್ನು ಹರಿದು ದಾಖಲೆ ನಾಶ ಮಾಡಿದ್ದಾರೆಂದು ಆರೋಪಿಸಲಾಗಿದೆ. ವಿಶೇಷ ನ್ಯಾಯಾಲಯ ತನ್ನ ವ್ಯಾಪ್ತಿ ಮೀರಿ ಸಚಿವರನ್ನು ದೊಷಮುಕ್ತರಾಗಿ ಘೋಷಿಸಿದೆ ಎಂದು ಇಲಾಖೆ ಆರೋಪಿಸಿದೆ.
ಐಟಿ ಅಧಿಕಾರಿಗಳು ಸಲ್ಲಿಸಿರುವ ದೂರಿನ ಅನುಸಾರ 2015-16ರ ಅವಧಿಗೆ 3.14 ಕೋಟಿ ರೂ ತೆರಿಗೆ ಮೌಲ್ಯಮಾಪನವನ್ನು ಡಿಕೆಶಿ ತಪ್ಪಿಸಿದ್ದಾರೆ ಎಂದು ಹೇಳಲಾಗಿದೆ.2016-17ರಲ್ಲಿ ಅಂದಾಜು ವರ್ಷಕ್ಕೆ 2.56 ಕೋಟಿ ರೂ. , 2017-18ರ ಅಂದಾಜು 7.08 ಕೋಟಿ ರೂ. ತೆರಿಗೆ ಮೌಲ್ಯಮಾಪನ ತಪ್ಪಿಸಲಾಗಿದೆ ಎಂದೂ ಸೇರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT