ಸಾಂದರ್ಭಿಕ ಚಿತ್ರ 
ರಾಜ್ಯ

ಉಪನ್ಯಾಸಕರಿಂದ ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನ ಬಹಿಷ್ಕಾರ

ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಈ ಬಾರಿಯೂ ವಿಘ್ನ ಎದುರಾಗಲಿದೆ. ಮಾ. 23ರಿಂದ ಆರಂಭಗೊಳ್ಳಲಿರುವ ದ್ವಿತೀಯ ಪಿಯುಸಿ...

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪನಕ್ಕೆ ಈ ಬಾರಿಯೂ ವಿಘ್ನ ಎದುರಾಗಲಿದೆ. ಮಾ. 23ರಿಂದ ಆರಂಭಗೊಳ್ಳಲಿರುವ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಬಹಿಷ್ಕರಿಸಲು ಪದವಿಪೂರ್ವ ಉಪನ್ಯಾಸಕರು ನಿರ್ಧರಿಸಿದ್ದಾರೆ. 
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪದವಿ ಪೂರ್ವ ಉಪನ್ಯಾಸಕರು ಸಾಮೂಹಿಕವಾಗಿ ಮೌಲ್ಯಮಾಪನ ಬಹಿಷ್ಕರಿಸಿ, ಮಾ.21ರಿಂದ ನಗರದ ಸ್ವತಂತ್ರ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ನಡೆಸಲು ತೀರ್ಮಾನಿಸಿದ್ದಾರೆ. 
ಈ ಸಂಬಂಧ ಇಂದು ನಗರದ ಖಾಸಗಿ ಹೋಟೆಲ್‍ ನಲ್ಲಿ ನಡೆದ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. 
1971ರ ಮಾದರಿಯಲ್ಲಿ ಉಪನ್ಯಾಸಕರಿಗೆ ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ರಜೆ ನೀಡಬೇಕು. ಪಿಯುಸಿ ಕಾಲೇಜುಗಳನ್ನು ಮೇ 2ರ ಬದಲಿಗೆ ಮೇ 28ರಂದು ಪ್ರಾರಂಭಿಸಬೇಕು. ಪ್ರತಿ ವರ್ಷ ಉಪನ್ಯಾಸಕರಿಗೆ 30 ಗಳಿಕೆ ರಜೆ, 20 ಅರ್ಧ ವೇತನ ರಜೆ ಹಾಗೂ ತಿಂಗಳ ಎರಡನೇ ಶನಿವಾರಗಳಂದು ರಜೆ ನೀಡಬೇಕು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಡ್ಡಾಯಗೊಳಿಸದೆ, ಐಚ್ಛಿಕವಾಗಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು  ಸಂಘ ಮುಂದಿಟ್ಟಿದೆ. 
ಸಂಘದ ಯಾವುದೇ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ನಾವು ಅನಿವಾರ್ಯವಾಗಿ ಮೌಲ್ಯಮಾಪನ ಬಹಿಷ್ಕರಿಸುತ್ತಿದ್ದೇವೆ. ಅದರಿಂದ ಉಂಟಾಗುವ ತೊಂದರೆಗಳಿಗೆ ಶಿಕ್ಷಣ ಇಲಾಖೆಯೇ ಹೊಣೆ ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಯುಎನ್ಐ ಕನ್ನಡ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. 
ಆದರೆ, ಮೌಲ್ಯಮಾಪನಕ್ಕೆ ಗೈರುಹಾಜರಾಗುವ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಎಚ್ಚರಿಕೆ ನೀಡಿದೆ. 
ಇಲಾಖೆಯ ನಿರ್ದೇಶಕ ಪಿ.ಸಿ.ಜಾಫರ್, ಶಿಕ್ಷಕರು ತಮ್ಮ ಬೇಡಿಕೆಗಳ ಈಡೇರಿಕೆಗೆ ಪ್ರತಿ ವರ್ಷ ಮೌಲ್ಯಮಾಪನದ ಸಂದರ್ಭದಲ್ಲಿ ಹೋರಾಟಕ್ಕಿಳಿಯುವುದು ಸರಿಯಲ್ಲ. ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡಬಾರದು. ಮೇ 2ರಂದು ಪದವಿ ಪೂರ್ವ ಕಾಲೇಜು ಆರಂಭಿಸಬೇಕು ಎಂಬುದು ಸರ್ಕಾರದ ನಿರ್ಧಾರ. ಇದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೆಗೆದುಕೊಳ್ಳಲಾಗಿರುವ ತೀರ್ಮಾನ ಎಂದಿದ್ದಾರೆ. 
ಸಂಘದ ಹೋರಾಟಕ್ಕೆ ವಿಧಾನಪರಿಷತ್‍ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹಾಗೂ ಬೋಜೇಗೌಡ ಬೆಂಬಲ ಸೂಚಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT