ಮಾತೆ ಮಾಹಾದೇವಿ 
ರಾಜ್ಯ

ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ

ಕೂಡಲಸಂಗಮದ ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕಳೆದ ಏಳು ದಿನಗಳಿಂದ ನಗರದ....

ಬೆಂಗಳೂರು: ಕೂಡಲಸಂಗಮದ ಬಸವ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕಳೆದ ಏಳು ದಿನಗಳಿಂದ ನಗರದ ಮಣಿಪಾಲ್​ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ತಜ್ಞವೈದ್ಯರ ತಂಡ ಚಿಕಿತ್ಸೆ ಮುಂದುವರೆಸಿದೆ.
ಮೂಲಗಳ ಪ್ರಕಾರ, ಸುಮಾರು ಒಂದು ವರ್ಷದಿಂದ ಮೂತ್ರಪಿಂಡ ವಿಫಲವಾಗಿದ್ದು, ಡಯಾಲಿಸಿಸ್​ ಮಾಡಿಸಿಕೊಳ್ಳುತ್ತಿದ್ದರು. ಆದರೆ ಈಗ ಹಿಂದೆಂಗಿಂತಲೂ ಅವರ ಆರೋಗ್ಯ ಹದಗೆಟ್ಟಿದೆ ಎನ್ನಲಾಗಿದೆ.
ಹೆಚ್ಚಿನ ಚಿಕಿತ್ಸೆ ಕುರಿತಂತೆ ತೀರ್ಮಾನ ಕೈಗೊಳ್ಳಲು ರಾಜಾಜಿನಗರದಲ್ಲಿರುವ ಬಸವ ಮಂಟಪದಲ್ಲಿ ಸಭೆ ಸೇರಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ. ಗೃಹ ಸಚಿವ ಎಂ.ಬಿ. ಪಾಟೀಲ್​ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಶೀಘ್ರದಲ್ಲೇ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆಯಿದೆ.
ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಾತೆ ಮಹಾದೇವಿ, ದೆಹಲಿಯಲ್ಲೂ ಪ್ರತಿಭಟನೆ ಮಾಡಿದ್ದರು. ಜತೆಗೆ ಪ್ರತ್ಯೇಕ ಲಿಂಗಾಯತ ಧರ್ಮ ಆಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ ಎಂಬ ಶಪಥ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT