ನೀತಿ ಸಂಹಿತೆ ಉಲ್ಲಂಘನೆ; ವಿಜಯಾನಂದ ಕಾಶಪ್ಪನವರ ವಿರುದ್ಧ ಜಾಮೀನು ರಹಿತ ವಾರಂಟ್ 
ರಾಜ್ಯ

ನೀತಿ ಸಂಹಿತೆ ಉಲ್ಲಂಘನೆ; ವಿಜಯಾನಂದ ಕಾಶಪ್ಪನವರ ವಿರುದ್ಧ ಜಾಮೀನು ರಹಿತ ವಾರಂಟ್

ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ನ್ಯಾಯಾಲಯ ಜಾಮೀನು ರಹಿತ ವಾರಂಟ್‍ ಜಾರಿ ಮಾಡಿದೆ.

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಹಾಜರಾಗದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ನ್ಯಾಯಾಲಯ ಜಾಮೀನು ರಹಿತ ವಾರಂಟ್‍ ಜಾರಿ ಮಾಡಿದೆ. 
ಬುಧವಾರ ಮುಂಜಾನೆ ಪ್ರಕರಣ ವಿಚಾರಣೆಗೆ ಬಂದಾಗ, ಕಾಶಪ್ಪನವರ ಪರ ವಕೀಲರು , ಅವರು ಶೌಚಾಲಯಕ್ಕೆ ಹೋಗಿದ್ದಾರೆ. ವಿಚಾರಣೆಯನ್ನು ಸ್ವಲ್ಪ ಕಾಲ ಮುಂದೂಡಿ ಎಂದು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ ವಿಚಾರಣೆಯನ್ನು ಮಧ್ಯಾಹ್ನ 1.45ಕ್ಕೆ ಮುಂದೂಡಿದರು. ಪ್ರಕರಣ ಮರು ವಿಚಾರಣೆಗೆ ಬಂದಾಗ ಪ್ರಕರಣದ ಪರ, ವಿರೋಧಿ ವಕೀಲರು ಕೂಡ ಹಾಜರಿರದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮತ್ತೆ ಮಧ್ಯಾಹ್ನ 3ಕ್ಕೆ ಮುಂದೂಡಿದರು. 
ಮಧ್ಯಾಹ್ನ ಪ್ರಕರಣ ವಿಚಾರಣೆಗೆ ಬಂದಾಗ, ಕಾಶಪ್ಪನವರ ಸಂಬಂಧಿಕರು ಹಠಾತ್ ನಿಧನ ಹೊಂದಿದ್ದರಿಂದ ಅನಿವಾರ್ಯವಾಗಿ ಅವರು ಹೊರಡಬೇಕಾಯಿತು. ಆದ್ದರಿಂದ ಇಂದಿನ ವಿಚಾರಣೆಗೆ ಅವರಿಗೆ ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ವಕೀಲರು ಮನವಿ ಮಾಡಿದರು.
ಇದರಿಂದ ಆಕ್ರೋಶಗೊಂಡ ನ್ಯಾಯಾಧೀಶರು, ಪದೇ ಪದೇ ಇಂತಹ ನೆಪಗಳನ್ನು ಹೇಳಿ ನ್ಯಾಯಾಲಯದ ಜೊತೆಗೆ ಆಟವಾಡುತ್ತಿದ್ದೀರಾ? ಎಂದು ವಕೀಲರನ್ನು ತರಾಟೆಗೆ ತೆಗೆದುಕೊಂಡು ಕಾಶಪ್ಪನವರ ವಿರುದ್ಧ ಜಾಮೀನು ರಹಿತ ವಾರಂಟ್‍ ಜಾರಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT