ಸಂಜೀವ್ ಕುಮಾರ್ 
ರಾಜ್ಯ

ಹಣ,ಉಡುಗೊರೆ ತಪಾಸಣೆಗೆ ಸಾರ್ವಜನಿಕರ ಸಹಕಾರ ಅಗತ್ಯ: ಸಂಜೀವ್ ಕುಮಾರ್

ಹಣ, ಉಡುಗೊರೆ ಪತ್ತೆಗಾಗಿ ತಪಾಸಣೆ ನಡೆಸುವ ವೇಳೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮನವಿ ಮಾಡಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಅಕ್ರಮ ತಡೆಗಟ್ಟಲು ವ್ಯಾಪಕ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹಣ, ಉಡುಗೊರೆ ಪತ್ತೆಗಾಗಿ ತಪಾಸಣೆ ನಡೆಸುವ ವೇಳೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಪ್ರಯಾಣದ ವೇಳೆಯಲ್ಲಿ ದಾಖಲೆಗಳಿಲ್ಲದೆ 50 ಸಾವಿರ ರೂಪಾಯಿಗೂ  ಮೇಲ್ಪಟ್ಟು ಹಣ ಇಟ್ಟುಕೊಳ್ಳುವಂತಿಲ್ಲ.10 ಸಾವಿರ ರೂಪಾಯಿಗೂ ಹೆಚ್ಚಿನ ಮೌಲ್ಯದ  ಉಡುಗೊರೆಗಳನ್ನು ತೆಗೆದುಕೊಂಡು ಹೋಗಲು ಅಗತ್ಯ ದಾಖಲೆ ಒದಗಿಸಬೇಕು ಎಂದರು.

ನಗದು ಸಾಗಿಸುವಾಗ ಬ್ಯಾಂಕುಗಳು ನಗದು ಹಣವನ್ನು ಹೊರಗುತ್ತಿಗೆಯ ಏಜೆನ್ಸಿ ಅಥವಾ ಕಂಪೆನಿ ವಾಹನಗಳಲ್ಲಿ ಸಾಗಿಸಬಾರದು.ಹೊರಗುತ್ತಿಗೆಯ ಏಜೆನ್ಸಿಗಳು ಕಂಪೆನಿಗಳು ಬ್ಯಾಂಕಿನ ಎಟಿಎಂಗಳಿಗೆ ಹಣ ತುಂಬಿಸಲು ಮತ್ತು ಒಂದು ಶಾಖೆಯಿಂದ ಮತ್ತೊಂದು ಶಾಖೆಗೆ ನಗದು ಸಾಗಿಸುವ ಸಂದರ್ಭದಲ್ಲಿ ಬ್ಯಾಂಕಿನಿಂದ ಅಧಿಕೃತ ಪತ್ರ ಅಥವಾ ದಾಖಲೆಗಳನ್ನು ಹೊಂದಿರಬೇಕು. ಹಣಸಾಗಿಸುವ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಹೊಂದಿರಬೇಕು ಎಂದು ಸ್ಪಷ್ಟಪಡಿಸಿದರು.
ಚೆಕ್ ಪೋಸ್ಟ್ ಗಳು ಮತ್ತಿತರ ಕಡೆಗಳಲ್ಲಿ ಜನ ಸಾಮಾನ್ಯರಿಗೆ ಸಣ್ಣಪುಟ್ಟ ಕಿರಿಕಿರಿ ಎದುರಾಗಬಹುದು.ಹಾಗೊಂದು ವೇಳೆ ಅನಗತ್ಯ ತೊಂದರೆ ಹಾಗೂ ನಿಯಮಬಾಹಿರವಾಗಿ ತಪಾಸಣೆ ಮಾಡಿರುವ ಬಗೆಗಿನ ದೂರುಗಳನ್ನು ಪರಿಶೀಲಿಸಲು ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿಯ ಮುಂದೆ ಬಾಧಿತರು ದೂರು ಸಲ್ಲಿಸಬಹುದು ಎಂದು ಸಂಜೀವ್ ಕುಮಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT