ಸಾಂದರ್ಭಿಕ ಚಿತ್ರ 
ರಾಜ್ಯ

ಬೇಸಿಗೆಯ ಬಿಸಿಲಿನ ಜೊತೆ ಏರುತ್ತಿದೆ ಚುನಾವಣಾ ಕಾವು

ಮಾರ್ಚ್ ತಿಂಗಳ ಮಧ್ಯಭಾಗವಿದು. ಬೇಸಿಗೆ ನೆತ್ತಿ ಸುಡುತ್ತಿದೆ. ಇತ್ತ ರಾಜಕೀಯ ಬಿಸಿ ಕೂಡ ಏರುತ್ತಿದೆ...

ಬೆಂಗಳೂರು: ಮಾರ್ಚ್ ತಿಂಗಳ ಮಧ್ಯಭಾಗವಿದು. ಬೇಸಿಗೆ ನೆತ್ತಿ ಸುಡುತ್ತಿದೆ. ಇತ್ತ ರಾಜಕೀಯ ಬಿಸಿ ಕೂಡ ಏರುತ್ತಿದೆ. ಏಪ್ರಿಲ್ ತಿಂಗಳಲ್ಲಿ ಇನ್ನೂ ಸೆಖೆಯ ಮಧ್ಯೆ ಚುನಾವಣಾ ಕಾವು ರಂಗೇರಲಿದೆ.
ಏಪ್ರಿಲ್ ತಿಂಗಳಲ್ಲಿ ಈ ತಿಂಗಳಿಗಿಂತಲೂ ಹೆಚ್ಚು ಕಾವು ಏರಲಿದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು. ಉತ್ತರ ಕರ್ನಾಟಕದಲ್ಲಿ ಈಗಾಗಲೇ ಉಷ್ಣಾಂಶ 36ರಿಂದ 40 ಡಿಗ್ರಿಗೆ ಏರಿಕೆಯಾಗಿದ. ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಕೂಡ ಇದು ಕಡಿಮೆಯಿಲ್ಲ.ಹೈದರಾಬಾದ್ ಕರ್ನಾಟಕದಲ್ಲಿ ಇನ್ನೂ ಅಧಿಕ.
ಸರಾಸರಿಗಿಂತ ಏಪ್ರಿಲ್ ನಲ್ಲಿ 4 ಡಿಗ್ರಿಯಷ್ಟು ಉಷ್ಣತೆ ಹೆಚ್ಚಾಗಲಿದೆ. ಈ ಬೇಸಿಗೆ ತುಂಬಾ ಸೆಖೆ ಇರಲಿದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ(ಕೆಎಸ್ ಎನ್ ಡಿಎಂಸಿ) ಶ್ರೀನಿವಾಸ ರೆಡ್ಡಿ.
ಕೆಲ ವರ್ಷಗಳ ಹಿಂದೆ ವಾತಾವರಣದಲ್ಲಿ ಉಷ್ಣತೆ ಮಧ್ಯಾಹ್ನ 12 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ಉಷ್ಣಾಂಶ ಅಧಿಕವಾಗಿರುತ್ತಿತ್ತು. ಅದೀಗ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಇರುತ್ತದೆ ಎನ್ನುತ್ತಾರೆ ಕೆಎಸ್ ಎನ್ ಡಿಎಂಸಿ ಯೋಜನೆ ವಿಜ್ಞಾನಿ ಮತ್ತು ಹವಾಮಾನತಜ್ಞ ಸುನಿಲ್ ಎಂ ಗಾವಸ್ಕರ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT