'ಸಾಗರ ಸಂಪದ' ಸಂಶೋಧನಾ ಹಡಗಿನಲ್ಲಿ ಬೆಂಕಿ 
ರಾಜ್ಯ

ಮಂಗಳೂರಿನಲ್ಲಿ ಅಗ್ನಿ ಅವಘಡಕ್ಕೆ ತುತ್ತಾದ ಹಡಗಿನಿಂದ 46 ಜನರ ರಕ್ಷಣೆ

ಮಂಗಳೂರಿನಲ್ಲಿ ಸಂಶೋಧನಾ ಹಡಗಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ರಕ್ಷಣೆಗೆ ಧಾವಿಸಿದ ಕರಾವಳಿ ಭದ್ರತಾಪಡೆಗಳು ಹಡಗಿನಲ್ಲಿದ್ದ 46 ಮಂದಿಯನ್ನು ರಕ್ಷಿಸಿದ್ದಾರೆ.

ಮಂಗಳೂರು: ಮಂಗಳೂರಿನಲ್ಲಿ ಸಂಶೋಧನಾ ಹಡಗಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ರಕ್ಷಣೆಗೆ ಧಾವಿಸಿದ ಕರಾವಳಿ ಭದ್ರತಾಪಡೆಗಳು ಹಡಗಿನಲ್ಲಿದ್ದ 46 ಮಂದಿಯನ್ನು ರಕ್ಷಿಸಿದ್ದಾರೆ.
ಇಲ್ಲಿನ ಸಮುದ್ರ ತೀರದಿಂದ 30 ಸಮುದ್ರ ಮೈಲಿ ದೂರದಲ್ಲಿ ಶುಕ್ರವಾರ ರಾತ್ರಿ ಅಗ್ನಿ ಹಡಗೊಂದು ಅಗ್ನಿ ಅವಘಡಕ್ಕೆ ತುತ್ತಾಗಿದ್ದು, ಅದರಲ್ಲಿದ್ದ 46 ಮಂದಿಯನ್ನು ಕರಾವಳಿ ಕಾವಲು ಪಡೆ ಪ್ರಾಣಾಪಾಯದಿಂದ ರಕ್ಷಿಸಿದೆ.  ಶಿಪ್ಪಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾದ 'ಸಾಗರ ಸಂಪದ' ಸಂಶೋಧನಾ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 30 ಸಿಬ್ಬಂದಿ ಹಾಗೂ 16 ಭಾರತೀಯ ಸಂಶೋಧನಾ ವಿಜ್ಞಾನಿಗಳು ಅದರಲ್ಲಿದ್ದರು ಎಂದು ಮೂಲಗಳು ತಿಳಿಸಿವೆ.
ಸುಮಾರು 10 ಗಂಟೆಗೆ ಸಮುದ್ರದಲ್ಲಿ ಬೆಂಕಿಯನ್ನು ಕಂಡ ಕರಾವಳಿ ಕಾವಲು ಪಡೆ ಅಧಿಕಾರಿಗಳು ತುರ್ತಾಗಿ ಸಂಬಂಧಿತರಿಗೆ ಸಂದೇಶ ರವಾನಿಸಿದ್ದಾರೆ. ವಿಪತ್ತಿನ ಕರೆಯನ್ನು ಸ್ವೀಕರಿಸಿದ ನೌಕಾಪಡೆ, ತಕ್ಷಣ ರಕ್ಷಣಾ ತಂಡವನ್ನು ಕಳುಹಿಸಿಕೊಟ್ಟಿದೆ.
ಹಡಗನ್ನು ಪ್ರವೇಶಿಸಿದ ರಕ್ಷಣಾ ತಂಡ, ಬೆಂಕಿ ನಂದಿಸಿ ಒಳಗಿದ್ದವರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ. ಹಡಗಿನ ಕ್ಯಾಬಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 8 ಕ್ಯಾಬಿನ್ ಗಳು ಹಾನಿಗೊಂಡಿವೆ ಎನ್ನಲಾಗಿದೆ. ಹಡಗಿನಲ್ಲಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಮಂಗಳೂರು ಬಂದರಿಗೆ ಕರೆ ತರಲಾಗಿದೆ. ನೆರವಿಗಾಗಿ ಹಡಗು ಮಂಗಳೂರು ಬಂದರಿನತ್ತ ಬರುತ್ತಿತ್ತು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT