ಪದವಿ ಪೂರ್ವ ಶಿಕ್ಷಣ ಇಲಾಖೆ 
ರಾಜ್ಯ

ಪ್ರಶ್ನೆಪತ್ರಿಕೆ ಕಬ್ಬಿಣದ ಕಡಲೆಯಾಗಿತ್ತು ಎಂದು ವಿದ್ಯಾರ್ಥಿಗಳ ಅಳಲು; ಪಿಯುಸಿ ಜೀವ ವಿಜ್ಞಾನದಲ್ಲಿ ಗ್ರೇಸ್ ಅಂಕ?

ಕಳೆದ ಗುರುವಾರ ನಡೆದ ದ್ವಿತೀಯ ಪಿಯುಸಿ ಜೀವ ವಿಜ್ಞಾನ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ...

ಬೆಂಗಳೂರು: ಕಳೆದ ಗುರುವಾರ ನಡೆದ ದ್ವಿತೀಯ ಪಿಯುಸಿ ಜೀವ ವಿಜ್ಞಾನ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ನೀಡಿದ ದೂರಿನ ಆಧಾರದ ಮೇಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ನೇಮಿಸಿದೆ.
ಮೊನ್ನೆ ನಡೆದ ಬಯಾಲಜಿ ಪರೀಕ್ಷೆ ತುಂಬಾ ಕಷ್ಟಕರವಾಗಿತ್ತು ಎಂದು ವಿದ್ಯಾರ್ಥಿಗಳು ದೂರು ನೀಡಿದ್ದರು. ಹೀಗಾಗಿ ತಜ್ಞರ ಸಮಿತಿ ನೇಮಿಸಿದ್ದು ಅವರು ಪ್ರಶ್ನೆಪತ್ರಿಕೆ ನಿಜಕ್ಕೂ ಕಷ್ಟಕರವಾಗಿತ್ತು ಎಂದು ಹೇಳಿದರೆ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ಹೇಳಿದೆ.
ಶಿಕ್ಷಣ ಇಲಾಖೆಯ ಸಹಾಯವಾಣಿ ಮತ್ತು ಇಮೇಲ್ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ರಾಜ್ಯದ ಹಲವು ಜಿಲ್ಲೆಗಳಿಂದ ವಿದ್ಯಾರ್ಥಿಗಳು ದೂರು ನೀಡಿದ್ದು ನೀಟ್ ಪರೀಕ್ಷೆಗಿಂತಲೂ ಬಯಾಲಜಿ ಪರೀಕ್ಷೆ ಕಷ್ಟವಾಗಿತ್ತು ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಆಯುಕ್ತರು ನಿನ್ನೆ ತಜ್ಞರ ಸಮಿತಿ ರಚಿಸಿದ್ದು ಸಮಿತಿ ಸದಸ್ಯರು ಪ್ರಶ್ನೆಪತ್ರಿಕೆ ನಿಜಕ್ಕೂ ಕಷ್ಟವಾಗಿತ್ತು ಎಂದು ಹೇಳಿದರೆ ಮಕ್ಕಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದು ಎಂದು ಹೇಳಿದೆ.
ರಾಜ್ಯದ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಸಹಾಯವಾಣಿಗೆ ಕರೆ ಮಾಡಿ ಅಳುತ್ತಾ ತಮ್ಮ ಸಮಸ್ಯೆ ಹೇಳಿಕೊಂಡರು. ಪ್ರಶ್ನೆಪತ್ರಿಕೆ ಕಷ್ಟವಾಗಿತ್ತು ಎಂಬುದೇ ಅವರ ಪ್ರಮುಖ ಅಳಲಾಗಿತ್ತು ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳುತ್ತಾರೆ. ನಾವಿದನ್ನು ಆಯುಕ್ತರ ಗಮನಕ್ಕೆ ತಂದಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT