ಪದವಿ ಪೂರ್ವ ಶಿಕ್ಷಣ ಇಲಾಖೆ 
ರಾಜ್ಯ

ಪ್ರಶ್ನೆಪತ್ರಿಕೆ ಕಬ್ಬಿಣದ ಕಡಲೆಯಾಗಿತ್ತು ಎಂದು ವಿದ್ಯಾರ್ಥಿಗಳ ಅಳಲು; ಪಿಯುಸಿ ಜೀವ ವಿಜ್ಞಾನದಲ್ಲಿ ಗ್ರೇಸ್ ಅಂಕ?

ಕಳೆದ ಗುರುವಾರ ನಡೆದ ದ್ವಿತೀಯ ಪಿಯುಸಿ ಜೀವ ವಿಜ್ಞಾನ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ...

ಬೆಂಗಳೂರು: ಕಳೆದ ಗುರುವಾರ ನಡೆದ ದ್ವಿತೀಯ ಪಿಯುಸಿ ಜೀವ ವಿಜ್ಞಾನ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ನೀಡಿದ ದೂರಿನ ಆಧಾರದ ಮೇಲೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂವರು ಸದಸ್ಯರನ್ನೊಳಗೊಂಡ ಸಮಿತಿಯನ್ನು ನೇಮಿಸಿದೆ.
ಮೊನ್ನೆ ನಡೆದ ಬಯಾಲಜಿ ಪರೀಕ್ಷೆ ತುಂಬಾ ಕಷ್ಟಕರವಾಗಿತ್ತು ಎಂದು ವಿದ್ಯಾರ್ಥಿಗಳು ದೂರು ನೀಡಿದ್ದರು. ಹೀಗಾಗಿ ತಜ್ಞರ ಸಮಿತಿ ನೇಮಿಸಿದ್ದು ಅವರು ಪ್ರಶ್ನೆಪತ್ರಿಕೆ ನಿಜಕ್ಕೂ ಕಷ್ಟಕರವಾಗಿತ್ತು ಎಂದು ಹೇಳಿದರೆ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದು ಎಂದು ಶಿಕ್ಷಣ ಇಲಾಖೆ ಹೇಳಿದೆ.
ಶಿಕ್ಷಣ ಇಲಾಖೆಯ ಸಹಾಯವಾಣಿ ಮತ್ತು ಇಮೇಲ್ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ರಾಜ್ಯದ ಹಲವು ಜಿಲ್ಲೆಗಳಿಂದ ವಿದ್ಯಾರ್ಥಿಗಳು ದೂರು ನೀಡಿದ್ದು ನೀಟ್ ಪರೀಕ್ಷೆಗಿಂತಲೂ ಬಯಾಲಜಿ ಪರೀಕ್ಷೆ ಕಷ್ಟವಾಗಿತ್ತು ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಆಯುಕ್ತರು ನಿನ್ನೆ ತಜ್ಞರ ಸಮಿತಿ ರಚಿಸಿದ್ದು ಸಮಿತಿ ಸದಸ್ಯರು ಪ್ರಶ್ನೆಪತ್ರಿಕೆ ನಿಜಕ್ಕೂ ಕಷ್ಟವಾಗಿತ್ತು ಎಂದು ಹೇಳಿದರೆ ಮಕ್ಕಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದು ಎಂದು ಹೇಳಿದೆ.
ರಾಜ್ಯದ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಸಹಾಯವಾಣಿಗೆ ಕರೆ ಮಾಡಿ ಅಳುತ್ತಾ ತಮ್ಮ ಸಮಸ್ಯೆ ಹೇಳಿಕೊಂಡರು. ಪ್ರಶ್ನೆಪತ್ರಿಕೆ ಕಷ್ಟವಾಗಿತ್ತು ಎಂಬುದೇ ಅವರ ಪ್ರಮುಖ ಅಳಲಾಗಿತ್ತು ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳುತ್ತಾರೆ. ನಾವಿದನ್ನು ಆಯುಕ್ತರ ಗಮನಕ್ಕೆ ತಂದಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದೇಶಿ ನೌಕರರ ನೇಮಕಾತಿಗೆ ಅಮೆರಿಕ ಕತ್ತರಿ: H-1B ವೀಸಾ ನಿರ್ಬಂಧ ಮತ್ತೊಂದು ವರ್ಷಕ್ಕೆ ಮುಂದುವರಿಕೆ..!

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು, ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!

ಮಂಗಳೂರಿನಲ್ಲಿ ಡಿಕೆಶಿ ಸಂಪುಟ ಸಭೆ, ತುಮಕೂರಿನಲ್ಲಿ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್: ಕೈ ಪಾಳಯದಲ್ಲಿ ಶುರುವಾಯ್ತಾ ಹೊಸ ಆಂತರಿಕ ತಂತ್ರಗಾರಿಕೆ..?

ರಾಜ್ಯದ 32,611 ಕೋಟಿ ರೂ. ಯೋಜನೆಗಳಿಗೆ ಗ್ರೀನ್‌ ಸಿಗ್ನಲ್‌: ಮಂಗಳೂರು ಸಂಪುಟ ಸಭೆಯಲ್ಲಿ ಸರ್ಕಾರ ಮಹತ್ವದ ಘೋಷಣೆ..!

ಕರಾವಳಿಯಲ್ಲಿ ಅಭಿವೃದ್ಧಿಯ ಅಲೆ: 16 ಸಾವಿರ ಕೋಟಿ ರೂ. ಪ್ಯಾಕೇಜ್‌ಗೆ ಸಂಪುಟ ಒಪ್ಪಿಗೆ, ಪ್ರವಾಸೋದ್ಯಮ, ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು..!