ಸಾಂದರ್ಭಿಕ ಚಿತ್ರ 
ರಾಜ್ಯ

ಅನೈತಿಕ ಸಂಬಂಧ: ಪತಿ ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನ ಬಂಧನ

ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಸೋಮವಾರ ಯಶವಂತಪುರ ಪೊಲೀಸರು....

ಬೆಂಗಳೂರು: ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಸೋಮವಾರ ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.
ಕಳೆದ ವರ್ಷ ಫೆ.25ರಂದು ಉಮಾಶಂಕರ್ ಎಂಬುವವರು ಮೃತಪಟ್ಟಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಮೃತರ ಅಣ್ಣನ ಮಗ ಅಶ್ವಥಪ್ಪ ಸೋಲದೇವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶವ ಪರೀಕ್ಷೆಯಿಂದ ವ್ಯಕ್ತಿ ಸಂಶಯಾಸ್ಪದವಾಗಿ ಮೃತಪಟ್ಟಿರುವುದು ದೃಢಪಟ್ಟಿತ್ತು.
ಪೊಲೀಸರು ಪತ್ನಿ ಸುಖಿತಾ(30) ಅವರನ್ನು ವಿಚಾರಣೆಗೊಳಪಡಿಸಿದಾಗ ತಾನು ಶ್ರೀನಿವಾಸ್ ಎಂಬುವವರೊಂದಿಗೆ ಅನೈತಿಕ ಸಂಬಂಧ ಹೊಂದಿರುವುದು ಪತಿಗೆ ಗೊತ್ತಾಗಿದ್ದರಿಂದ, ಪ್ರಿಯಕರನ್ನು ರಾತ್ರಿ ಮನೆಗೆ ಕರೆಸಿ ತನ್ನ ಪತಿಯನ್ನು ಉಸಿರುಗಟ್ಟಿ ಸಾಯಿಸಿರುವುದಾಗಿ ಒಪ್ಪಿಕೊಂಡಿದ್ದಾಳೆ. 
ಆರೋಪಿಗಳಾದ ಪತ್ನಿ ಸುಖಿತಾ(30) ಹಾಗೂ ಪ್ರಿಯಕರ ಶ್ರೀನಿವಾಸ್ (31) ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT