ಸಾಂದರ್ಭಿಕ ಚಿತ್ರ 
ರಾಜ್ಯ

ಭ್ರಷ್ಟರಿಗೆ ಎಸಿಬಿ ಶಾಕ್: ರಾಜ್ಯದ ನಾಲ್ವರು ಅಧಿಕಾರಿಗಳ ಮನೆ ಮೇಲೆ ದಾಳಿ

ಭ್ರಷ್ಟಾಚಾರ ವಿರೋಧಿ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ರಾಜ್ಯದ ನಾಲ್ಕು ಸರ್ಕಾರಿ ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ..

ಬೆಂಗಳೂರು: ಭ್ರಷ್ಟಾಚಾರ ವಿರೋಧಿ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ರಾಜ್ಯದ  ನಾಲ್ಕು  ಸರ್ಕಾರಿ ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ  ದಾಳಿ ಮಾಡಿದ್ದಾರೆ. 
ಬಿ.ಸಿ. ಸತೀಶ್, ಸಹಕಾರಿ ಸೊಸೈಟೀಸ್ ರಿಜಿಸ್ಟ್ರಾರ್, ಹೆಡ್ ಆಫೀಸ್, ಬೆಂಗಳೂರು, ಶರದ್ ಗಂಗಪ್ಪ ಇಜೇರಿ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಇಲಾಖೆಯ ಹೆಚ್ಚುವರಿ ನಿರ್ದೇಶಕ, ವಿಜಯಪುರಾ, ಪ್ರಕಾಶ್ ಗೌಡ ಕುದರಿಮೋತಿ ಕೃಷಿ ಅಧಿಕಾರಿ, ಕೃಷಿ ಸಂಪರ್ಕ ಕೇಂದ್ರ, ಮುಂಡರಗಿ ಗದಗ ಜಿಲ್ಲೆ,  ಎಸ್.ಪಿ. ಮಂಜುನಾಥ್, ಬಿಬಿಎಂಪಿ ಸಹಾಯಕ ತೆರಿಗೆ ಅಧಿಕಾರಿ ಅವರುಗಳ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆಯೆಂದು ಎಸಿಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚುವರಿ ನೋಂದಾವಣಾಧಿಕಾರಿಯಾಗಿರುವ ಸತೀಶ್‌ ಬಿ.ಸಿ. ಅವರ ಬಸವೇಶ್ವರ ನಗರದಲ್ಲಿರುವ ನಿವಾಸದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಇಲ್ಲಿನ ವೀರಶೈವ ಕೊ ಅಪರೇಟಿವ್‌ ಬ್ಯಾಂಕ್‌ ನಲ್ಲಿ ಸತೀಶ್‌ ಅವರ ಹೆಸರಿನಲ್ಲಿದ್ದ ಮೂರು ಅಕೌಂಟ್‌ ಗಳಲ್ಲಿ 1.5 ಕೋಟಿ ರೂಪಾಯಿಗಳ ಹಣ ಪತ್ತೆಯಾಗಿದೆ. ಇದೀಗ ಎಸಿಬಿ ಅಧಿಕಾರಿಗಳು ಸತೀಶ್‌ ಅವರ ನಿವಾಸದಲ್ಲಿ ಆಸ್ತಿ ಕಡತಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಇನ್ನು ಎಸಿಸಿ ಶರದ್‌ ಇಜಾರಿ ಅವರ ವಿಜಯಪುರದ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಆರು ಲಕ್ಷ ನಗದು, ಆರು ನಿವೇಶನ ದಾಖಲೆಗಳು ಮತ್ತು ಬ್ಯಾಂಕ್‌ ಲಾಕರ್‌ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿ ಸಂಬಂಧಿತ ಕಡತಗಳ ಪರಿಶೀಲನೆಯನ್ನು ಎಸಿಬಿ ಅಧಿಕಾರಿಗಳು ಮುಂದುವರೆಸಿದ್ದಾರೆ. ದಾಳಿಗೆ ಸಂಬಂಧಿಸಿದ ಇನ್ನಷ್ಟು ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

SCROLL FOR NEXT