ನಂಜನಗೂಡು ಶ್ರೀಕಂಠೇಶ್ವರ ಜಾತ್ರೆ 
ರಾಜ್ಯ

ನಂಜನಗೂಡು ಪಂಚ ಮಹಾರಥೋತ್ಸವಕ್ಕೆ ಆರಂಭದಲ್ಲೇ ವಿಘ್ನ: ತುಂಡಾದ ರಥದ ಹಗ್ಗ;3 ಗಂಟೆ ವಿಳಂಬ

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆಯುವ ವಾರ್ಷಿಕ ಪಂಚ ಮಹಾರಥೋತ್ಸವಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ, ಉತ್ಸವ ಮೂರ್ತಿ ಸ್ಥಾಪಿತ ..

ಮೈಸೂರು: ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆಯುವ ವಾರ್ಷಿಕ ಪಂಚ ಮಹಾರಥೋತ್ಸವಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ, ಉತ್ಸವ ಮೂರ್ತಿ ಸ್ಥಾಪಿತ ರಥವನ್ನು ಎಳೆಯುವ  ಹಗ್ಗ ತಂಡಾಗಿದೆ. 
ಬೆಳಗ್ಗೆ 6.40 ರ ಮೀನ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಬೇಕಿತ್ತು, ದೇವಾಲಯದ ಎಡಭಾಗದಲ್ಲಿ ರಥದ ಚಕ್ರಗಳನ್ನು ಇರಿಸಲಾಗಿತ್ತು, ಬೆಳಗ್ಗೆ 6.40ರ ಶುಭ ಲಗ್ನದಲ್ಲಿ ರಥವನ್ನು ಎಳೆಯಲು ಮುಂದಾದಾಗ ಚಕ್ರ ಸ್ವಲ್ಪವೂ ಉರುಳಲಿಲ್ಲ, ಹೀಗಾಗಿ ಮುಹೂರ್ಥವನ್ನು 7 ಗಂಟೆಗೆ ಮುಂದೂಡಲಾಯಿತು, ಅಂತಿಮವಾಗಿ ಬೆಳಗ್ಗೆ 9.27ಕ್ಕೆ ರಥೋತ್ಸವ ಜರುಗಿತು.
ರಥದ ಹಗ್ಗವನ್ನು ಮೂರು ಬಾರಿ ಬದಲಾಯಿಸಲಾಯಿತು. ಕಡಿಮೆ ಗುಣಮಟ್ಟದ ಹಗ್ಗದಿಂದಾಗಿ ಪದೇ ಪದೇ ತುಂಡಾಗುತ್ತಿತ್ತು, 4ನೇ ಭಾರಿಗೆ ತಂದ ಭಾರೀ ದೊಡ್ಡ ಹಗ್ಗದಿಂದಾಗಿ ರಥ ಮುಂದೆ ಜರುಗಿತು, ಮತ್ತೊಂದು ಅವಕಾಶ ತೆಗೆದುಕೊಳ್ಳಲು ಬಯಸದ ದೇವಾಲಯದ ಆಡಳಿತ ಮಂಡಳಿ ಎರಡು ಅರ್ಥ್ ಮೂವರ್ ಗಳಿಂದ ರಥನ್ನು ತಳ್ಳಿಸಲಾಯಿತು..
ರಥೋತ್ಸವ ನೋಡಲು ಸಾವಿರಾರು ಮಂದಿ ಭಕ್ತರಿಗೆ ನಿರಾಸೆಯಾಯಿತು.ವಿಳಂಬಕ್ಕಾಗಿ ಅಧಿಕಾರಿಗಳನ್ನು ದೂರದೇ ಸುಮ್ಮನೆ ತೆರಳಿದರು, ಕೆಲವರು ಮಾತ್ರ ತಮ್ಮ ಹಣೆಬರಹ ಧೂಷಿಸಿ ತೆರಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT