ಧಾರವಾಡದಲ್ಲಿ ಕುಸಿದುಬಿದ್ದ ನಿರ್ಮಾಣ ಹಂತದ ಕಟ್ಟಡ 
ರಾಜ್ಯ

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ; ಆರೋಪ, ಪ್ರತ್ಯಾರೋಪಗಳ ಸುರಿಮಳೆ

ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬೀಳಲು ಕಟ್ಟಡ ಮಾಲೀಕರು ಕಾರಣ ಎಂದು...

ಹುಬ್ಬಳ್ಳಿ: ಧಾರವಾಡದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬೀಳಲು ಕಟ್ಟಡ ಮಾಲೀಕರು ಕಾರಣ ಎಂದು ಹೇಳಲಾಗುತ್ತಿದ್ದರೂ ಕೂಡ ಕಟ್ಟಡ ನಿರ್ಮಿಸುವಾಗ ಕಾನೂನನ್ನು ಸರಿಯಾಗಿ ಪಾಲಿಸಲಾಗಿತ್ತೇ ಎಂಬ ಬಗ್ಗೆ ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಅಧಿಕಾರಿಗಳಿಗೆ ಸಹ ಈ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ.
ಕಟ್ಟಡ ಕುಸಿದುಬಿದ್ದ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಅದ ಕಾನೂನು ಸ್ಥಿತಿಗತಿ ಬಗ್ಗೆ ಅರಿವು ಇರಲಿಲ್ಲ. ಇದನ್ನು ಪಾಲಿಕೆಯ ವಲಯ ಆಯುಕ್ತರೇ ಒಪ್ಪಿಕೊಂಡಿದ್ದಾರೆ. ನಗರ ಯೋಜನೆ ಅಧಿಕಾರಿಗಳ ಬಳಿ ಸಹ ಯಾವುದೇ ಮಾಹಿತಿಯಿಲ್ಲ. ದಾಖಲೆಗಳನ್ನು ನೋಡಿದ ಮೇಲಷ್ಟೇ ಕಟ್ಟಡ ನಿರ್ಮಾಣಕ್ಕೆ ಪೂರ್ಣ ಪ್ರಮಾಣಪತ್ರ(ಸಿಸಿ) ನೀಡಿಲ್ಲ, ಕೇವಲ ಭಾಗಶಃ ಪೂರ್ಣ ಪ್ರಮಾಣಪತ್ರ ನೀಡಲಾಗಿದೆ ಎಂಬುದು ಗೊತ್ತಾಗಿದ್ದು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಸಿ ಡಬ್ಲ್ಯು ಶಕಿಲ್ ಹೇಳುವ ಅಹ್ಮದ್ ಹೇಳುವ ಪ್ರಕಾರ, ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಭಾಗಶಃ ಪೂರ್ಣ ಪ್ರಮಾಣಪತ್ರ ನೀಡುವ ಅವಕಾಶವಿದೆ. ಇದರಡಿ, ಬೇಸ್ ಮೆಂಟ್ ಮತ್ತು ಕೆಳಹಂತದ ಮಹಡಿಗೆ ಮಾತ್ರ ಪೂರ್ಣ ಪ್ರಮಾಣಪತ್ರ ನೀಡಲಾಗುತ್ತದೆಯೇ ಹೊರತು ಮೊದಲ ಮತ್ತು ಎರಡನೇ ಮಹಡಿಗಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT