ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಯೋಗಕ್ಷೇಮ ವಿಚಾರಿಸಿದ ಸಿಎಂ ಕುಮಾರಸ್ವಾಮಿ 
ರಾಜ್ಯ

ಧಾರವಾಡದಲ್ಲಿ ಕಟ್ಟಡ ಕುಸಿತ: ಸಿಎಂ ಪರಿಹಾರ ಘೋಷಣೆಗೆ ಚುನಾವಣಾ ನೀತಿ ಸಂಹಿತೆ ಅಡ್ಡಿ!

ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದು ಹತ್ತಾರು ಜನರ ಸಾವು ನೋವಿಗೆ ಕಾರಣವಾದವರನ್ನು ಕಾನೂನಿನ...

ಧಾರವಾಡ: ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದು ಹತ್ತಾರು ಜನರ ಸಾವು ನೋವಿಗೆ ಕಾರಣವಾದವರನ್ನು ಕಾನೂನಿನ ವ್ಯಾಪ್ತಿಯಡಿ ಕ್ರಮ ತೆಗೆದುಕೊಳ್ಳದೆ ಬಿಡುವುದಿಲ್ಲ, ಅವರು ಎಷ್ಟೇ ಪ್ರಭಾವಿ ವ್ಯಕ್ತಿಗಳಾಗಿದ್ದರೂ ಸಹ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ನಿನ್ನೆ ಧಾರವಾಡದಲ್ಲಿ ಕಟ್ಟಡ ಕುಸಿತದಲ್ಲಿ ಗಾಯಗೊಂಡವರು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಮಾತನಾಡಿಸಿದರು. ಆದರೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಮತ್ತು ಗಾಯಾಳುಗಳಿಗೆ ಯಾವುದೇ ಪರಿಹಾರ ಘೋಷಿಸಲಿಲ್ಲ.
ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಅಲ್ಲಿನ ಪರಿಸ್ಥಿತಿ ಹಾಗೂ ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ಪರಿಶೀಲಿಸಿದರು. ರಾಷ್ಟ್ರೀಯ ರಕ್ಷಣಾ ಕಾರ್ಯಪಡೆಯ ತಂಡಗಳ ಜೊತೆ ಉನ್ನತ ಮಟ್ಟದ ಅಧಿಕಾರಿಗಳು ಸೇರಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ತಂಡ ನಿನ್ನೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಪರಿಸ್ಥಿತಿಯ ಬಗ್ಗೆ ವಿವರ ನೀಡಿತು.
ಕಟ್ಟಡಕ್ಕೆ ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿದ್ದರಿಂದ ಕಟ್ಟಡ ಕುಸಿಯಲು ಕಾರಣವಾಗಿರಬಹುದು ಎಂದು ತಮಗೆ ಮಾಹಿತಿ ಬಂದಿದೆ ಎಂದು ಕುಮಾರಸ್ವಾಮಿ ಸುದ್ದಿಗಾರರಿಗೆ ಹೇಳಿದರು. 5 ಹಂತದ ನಿರ್ಮಾಣ ಕಟ್ಟಡ ಕುಸಿದಿದೆ ಎಂದು ಮುಖ್ಯ ಕಾರ್ಯದರ್ಶಿಗಳು ನನಗೆ ಮಾಹಿತಿ ನೀಡಿದಾಗ ನಾನು ಆಶ್ಚರ್ಯಪಟ್ಟೆ. ಕೂಡಲೇ ಜಿಲ್ಲಾಡಳಿತವನ್ನು ಸಂಪರ್ಕಿಸಿ ತಕ್ಷಣ ತುರ್ತು ಪರಿಹಾರ ಕಾಮಗಾರಿ ನಡೆಸುವಂತೆ ಸೂಚಿಸಿದೆನು. ಜಿಲ್ಲಾಡಳಿತ ಸರಿಯಾದ ಕೆಲಸ ಮಾಡುತ್ತಿದೆ ಎಂದರು.
ಜಿಲ್ಲಾಡಳಿತದಿಂದ ಪರಿಹಾರ: ಸ್ಥಳೀಯ ಆಡಳಿತ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಘೋಷಿಸಿದೆ. ಅದರ ಆಧಾರದ ಮೇಲೆ ರಾಜ್ಯ ಸರ್ಕಾರ ಹೆಚ್ಚಿನ ಪರಿಹಾರ ಘೋಷಣೆ ಮಾಡಲಿದೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT