ಸಾಂದರ್ಭಿಕ ಚಿತ್ರ 
ರಾಜ್ಯ

ಮಳೆ ನೀರು ಕೊಯ್ಲು ಅಳವಡಿಸಿಲ್ಲವೇ, ನಿಮ್ಮ ಮನೆಗೆ ನೀರಿನ ಸರಬರಾಜು ಕಡಿಮೆ- ಜಲಮಂಡಳಿ ಎಚ್ಚರಿಕೆ

ನಗರದಲ್ಲಿ ಮಳೆ ನೀರು ಕೊಯ್ಲು ಅವಶ್ಯವಾಗಿದ್ದರೂ, ಇಲ್ಲಿಯವರೆಗೆ ಅದನ್ನು ಅಳವಡಿಸದ ಮನೆಗಳಿಗೆ ಕಾವೇರಿ ನೀರಿನ ಸರಬರಾಜಿಗೆ ಮಿತಿ ಹೇರಲಾಗುವುದು ಎಂದು ಜಲಮಂಡಳಿ ಎಚ್ಚರಿಕೆ ನೀಡಿದೆ.

ಬೆಂಗಳೂರು: ನಗರದಲ್ಲಿ ಮಳೆ ನೀರು ಕೊಯ್ಲು ಅವಶ್ಯವಾಗಿದ್ದರೂ, ಇಲ್ಲಿಯವರೆಗೆ ಅದನ್ನು ಅಳವಡಿಸದ ಮನೆಗಳಿಗೆ ಕಾವೇರಿ ನೀರಿನ ಸರಬರಾಜಿಗೆ ಮಿತಿ ಹೇರಲಾಗುವುದು ಎಂದು ಜಲಮಂಡಳಿ ಎಚ್ಚರಿಕೆ ನೀಡಿದೆ.

ವಿಶ್ವ ಜಲದಿನದ ಅಂಗವಾಗಿ ಹೊಸ ನಿಯಮಗಳ ಅಧಿಸೂಚನೆ ಹೊರಡಿಸಿರುವ ಜಲಮಂಡಳಿ, ನಗರದಲ್ಲಿ ಮಳೆನೀರು ಕೊಯ್ಲು ಯೋಜನೆಯ ಯಶಸ್ವಿ ಜಾರಿಗೆ ಮುಂದಾಗಿದೆ. ಮಳೆನೀರು ಕೊಯ್ಲು ಅಳವಡಿಸಿಕೊಂಡಿರುವ ಕಟ್ಟಡಗಳ ಸ್ಥಿತಿಗತಿಯ ಬಗ್ಗೆ ಆಯಾ ಪ್ರದೇಶದ ನಿವಾಸಿಗಳ ಕಲ್ಯಾಣ ಸಂಘಗಳಿಂದ ಮಾಹಿತಿ ಪಡೆಯಲಾಗುವುದು. ಅದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಅಧಿಸೂಚನೆ ತಿಳಿಸಿದೆ.

ನಿವಾಸಿಗಳ ಕಲ್ಯಾಣ ಸಂಘ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ನಗರದಲ್ಲಿರುವ ಎಲ್ಲ ತ್ಯಾಜ್ಯ ನೀರು ಶುದ್ಧೀಕರಣ ಘಟಕಗಳನ್ನು ತಪಾಸಣೆ ನಡೆಸಿ, ಅಪಾರ್ಟ್ ಮೆಂಟ್‍ಗಳಲ್ಲಿ ನಿಯಮಾನುಸಾರ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲದಿರುವುದು ಕಂಡುಬಂದಲ್ಲಿ, ವಿದ್ಯುತ್ ಸರಬರಾಜು ಇಲಾಖೆಗೆ ದೂರು ನೀಡಲಾಗುವುದು ಹಾಗೂ ನೀರಿನ ಸರಬರಾಜು ಕಡಿಮೆ ಮಾಡಲಾಗುವುದು ಎಂದು ಅಧಿಸೂಚನೆ ಎಚ್ಚರಿಕೆ ನೀಡಿದೆ.

ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪಿಸಿರುವ ಅಪಾರ್ಟ್ ಮೆಂಟ್‍ ಗಳಲ್ಲಿ ಹೆಚ್ಚುವರಿ ನೀರು ಉಳಿದಲ್ಲಿ ಅದನ್ನು ಜೋಡಿ ಕೊಳವೆಯ ಮೂಲಕ ಜಲಮಂಡಳಿಯಿಂದ ಅನುಮತಿ ಪಡೆದಿರುವ ಇತರ ಅಪಾರ್ಟ್ ಮೆಂಟ್ ಹಾಗೂ ಮನೆಗಳಿಗೆ ಪೂರೈಕೆ ಮಾಡಬಹುದು.
ಬಹುಮಹಡಿ ಕಟ್ಟಡಗಳಲ್ಲಿ ಅತ್ಯಂತ ಕಡಿಮೆ ನೀರು ಬಳಸುವ ವ್ಯಕ್ತಿಗಳನ್ನು ಜಲಮಂಡಳಿಯ ತಜ್ಞರ ಸಮಿತಿಗೆ ಸೇರಿಸಿ ಅವರ ಸಲಹೆಗಳನ್ನು ಪಡೆಯಲಾಗುವುದು. 2011ರಿಂದ ಇಲ್ಲಿಯವರೆಗೆ ವಸತಿ ಪ್ರದೇಶಗಳಿಗೆ  ನೀಡಲಾಗಿರುವ 20 ಸಾವಿರ ಕೊಳವೆ ಬಾವಿಗಳ  ಮಾಹಿತಿ ಪಡೆದು, ಅದರ ದುರುಪಯೋಗ ಮಾಡಿಕೊಳ್ಳುತ್ತಿರುವ ಟ್ಯಾಂಕರ್ ಮಾಲೀಕರ ಪರವಾನಗಿ ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT