ಜೆ.ಎನ್. ಗಣೇಶ್ 
ರಾಜ್ಯ

ಆನಂದ್ ಸಿಂಗ್ ಹಲ್ಲೆ ಪ್ರಕರಣ: ಗಣೇಶ್​ ಜಾಮೀನು ಅರ್ಜಿ ವಜಾ

ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ನಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಜಾಮೀನು ಅರ್ಜಿ ವಜಾಗೊಂಡಿದೆ.

ಬೆಂಗಳೂರು: ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ನಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ನಡೆಸಿದ ಹಲ್ಲೆ  ಪ್ರಕರಣಕ್ಕೆ ಸಂಬಂಧಿಸಿ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಜಾಮೀನು ಅರ್ಜಿ ವಜಾಗೊಂಡಿದೆ. 
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಗಣೇಶ್ ಅವರ ಜಾಮೀನು ಅರ್ಜಿ ವಜಾಗೊಳಿಸಿದ್ದು ಗಣೇಶ್ ಅವರಿಗೆ ಜೈಲುವಾಸ ಖಾಯಂ ಆಗಿದೆ.
ಸೋಮವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ  ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ.ರಾಮಚಂದ್ರ ಉದಾರ್ ಜಾಮೀನು ಅರ್ಜಿ ವಜಾ ಮಾಡಿ ಆದೇಶಿಸಿದ್ದಾರೆ. ಗಣೇಶ್ ಪರ ವಕೀಲ  ಸಿ.ಎಚ್​.  ಹನುಮಂತರಾಯಪ್ಪ ವಾದ  ಮಂಡಿಸಿದ್ದರೆ ಬಿಡದಿ ಪೊಲೀಸರ ಪರ ಸರ್ಕಾರಿ ಅಭಿಯೋಜಕಿ ರಾಜೇಶ್ವರಿ ಪ್ರತಿವಾದ ಮಂಡಿಸಿದ್ದಾರೆ.
ಗಣೇಶ್ ನಡೆಸಿದ್ದ ಹಲ್ಲೆಯಿಂದಾಗಿ ಆನಂದ್ ಸಿಂಗ್ ಅವರ ಕಣ್ಣು, ತಲೆಗೆ ಗಂಭೀರ ಗಾಯವಾಗಿತ್ತು.ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು. ಈ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಬಿಡದಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಶಾಸಕ ಗಣೇಶ್ ನಾಪತ್ತೆಯಾಗಿದ್ದರು. ಸರಿಯಾಗಿ ಒಂದು ತಿಂಗಳ ನಂತರ ಗುಜರಾತಿನಲ್ಲಿ ಶಾಸಕರ ಬಂಧನವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT