ಮೈಸೂರು ಮಹಾನಗರ ಪಾಲಿಕೆ 
ರಾಜ್ಯ

ಮೈಸೂರು: 30 ಪೈಸೆ ವಿವಾದ, 1500 ರೂ. ಪರಿಹಾರ ನೀಡುವಂತೆ ಎಂಸಿಸಿಗೆ ಆದೇಶ

ಗ್ರಾಹಕರಿಗೆ ಹೆಚ್ಚುವರಿಯಾಗಿ 70 ಪೈಸೆ ನೀರಿನ ಶುಲ್ಕ ವಿಧಿಸಿದ್ದರಿಂದ 1500 ರೂ. ಪರಿಹಾರ ನೀಡುವಂತೆ ಮೈಸೂರು ಮಹಾನಗರ ಪಾಲಿಕೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶಿಸಿದೆ.

ಮೈಸೂರು: ಗ್ರಾಹಕರಿಗೆ ಹೆಚ್ಚುವರಿಯಾಗಿ 70 ಪೈಸೆ ನೀರಿನ ಶುಲ್ಕ ವಿಧಿಸಿದ್ದರಿಂದ 1500 ರೂ. ಪರಿಹಾರ ನೀಡುವಂತೆ ಮೈಸೂರು ಮಹಾನಗರ ಪಾಲಿಕೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಆದೇಶಿಸಿದೆ.

ಈ ಸಂಬಂಧ  ರಾಮಕೃಷ್ಣ ನಗರ ಹೆಚ್ ಬ್ಲಾಕ್  ನಿವಾಸಿ ಸತೀಶ್, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ  ಜೂನ್ 2018ರಲ್ಲಿ ದೂರು ದಾಖಲಿಸಿದ್ದರು.  ವಾಣಿ ವಿಲಾಸ ವಾಟರ್ ವರ್ಕ್ಸ್ ನಿಂದ  ಅವರು 340. 30 ರೂಪಾಯಿ ನೀರಿನ ಬಿಲ್ ಪಡೆದುಕೊಂಡಿದ್ದರು.  ಆದಾಗ್ಯೂ, ಸತೀಶ್ ಕೇವಲ 340 ರೂಪಾಯಿ ಮಾತ್ರ ಪಾವತಿಸಿದ್ದರು.

ಜುಲೈ ತಿಂಗಳಲ್ಲಿ  ಸತೀಶ್  341 ರೂ ಬಿಲ್ ಪಡೆದುಕೊಂಡಿದ್ದು, ಕಳೆದ ಬಾರಿ 30 ಪೈಸೆ ಬಾಕಿ ಉಳಿಸಿಕೊಂಡಿರುವ  ಹಿನ್ನೆಲೆಯಲ್ಲಿ 70 ಪೈಸೆ ದಂಡ  ವಿಧಿಸಲಾಗಿತ್ತು. ಇದರ ವಿರುದ್ಧ ಸತೀಶ್  ವಾಣಿ ವಿಲಾಸ್ ವಾಟರ್ ವರ್ಕ್ಸ್ ಹಾಗೂ ಅದರ ಮಾತೃ ಸಂಸ್ಥೆ ಮೈಸೂರು ಮಹಾನಗರ ಪಾಲಿಕೆ ವಿರುದ್ಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯಲ್ಲಿ ದೂರು ದಾಖಲಿಸಿದ್ದರು.
30 ಪೈಸೆಯನ್ನು ಹೆಚ್ಚುವರಿಯಾಗಿ ವಿಧಿಸಲಾಗಿದ್ದು,  ದಂಡವನ್ನು ಪಾವತಿಸುವುದಿಲ್ಲ ಎಂದು ದೂರುದಾರರು ಅರ್ಜಿಯಲ್ಲಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT