ಸಂಗ್ರಹ ಚಿತ್ರ 
ರಾಜ್ಯ

ಕೋಲಾರ: ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, 2 ಮಕ್ಕಳ ಸಾವು, ತಾಯಿ ಗಂಭೀರ

ಪತಿಯ ಅಕ್ರಮ ಸಂಬಂಧ, ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರದ ತಂತಾರ್ಲಹಳ್ಳಿಯಲ್ಲಿ ನಡೆದಿದೆ

ಕೋಲಾರ: ಪತಿಯ ಅಕ್ರಮ ಸಂಬಂಧ, ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರದ ತಂತಾರ್ಲಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಮಕ್ಕಳಿಬ್ಬರು ಸಾವನ್ನಪ್ಪಿದ್ದರೆ ತಾಯಿ ಸ್ಥಿತಿ ಗಂಭೀರವಾಗಿದೆ.
ಕುಮಾರ್(3) ಹಾಗೂ ಮಧು(5) ಎಂಬ ಇಬ್ಬರು ಮಕ್ಕಳಿಗೆ ವಿಷವುಣಿಸಿದ ತಾಯಿ ರಾಧಮ್ಮ(28)  ತಾನೂ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ. ಆದರೆ ಮಕ್ಕಳು ಮೃತಪಟ್ಟಿದ್ದರೆ ರಾಧಮ್ಮನ ಸ್ಥಿತಿ ಮಾತ್ರ ಚಿಂತಾಜನಕವಾಗಿದ್ದು ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಕೃಷ್ಣಪ್ಪನ ಪತ್ನಿಯಾಗಿದ್ದ ರಾಧಮ್ಮನಿಗೆ ಪತಿಯ ಅಕ್ರಮ ಸಂಬಂಧದ ಸುಳಿವಿತ್ತು.ಅನೇಕ ಬಾರಿ ಈ ಸಂಬಂಧದಿಂದ ದೂರವಾಗಲು ಪತಿಯನ್ನು ಕೇಳಿದರೂ ಆತ ಅದಕ್ಕೊಪ್ಪದೆ ಹೋದಾಗ ಜೀವನದಲ್ಲಿ ಬೇಸತ್ತು ಈ ಕೃತ್ಯಕ್ಕೆ ಮುಂದಾಗಿದ್ದಾಳೆ.
ಸೋಮವಾರ ಮದ್ಯಾಹ್ಣ ತಂಪುಪಾನೀಯದಲ್ಲಿ ವಿಷ ಹಾಕಿ ಮಕ್ಕಳಿಗೆ ನೀಡಿದ್ದ ರಾಧಮ್ಮ ತಾನು ಸಹ ವಿಷ ಕುಡಿದು ಸಾಯಲು ಮುಂದಾಗಿದ್ದಾಳೆ. ಆದರೆ ಆಕೆಯ ನರಳಾಟ ಕೇಳಿದ ನೆರೆಹೊರೆಯ ಜನರು ಆಕೆ ಹಾಗೂ ಮಕ್ಕಳನ್ನು ಕೋಲಾರ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಮಾರ್ಗ ಮದ್ಯದಲ್ಲಿ ಮಕ್ಕಳಿಬ್ಬರು ಮೃತಪಟ್ಟಿದ್ದಾರೆ.
ಘಟನೆ ಮಾಹಿತಿ ಪಡೆದ ಶ್ರೀನಿವಾಸಪುರ ಪೋಲೀಸರು ಸ್ಥಳಕ್ಕಾಗಮಿಸಿ ರಾಧಮ್ಮನ ಪತಿ ಕೃಷ್ಣಪ್ಪನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT