ಮಲೆಮಹದೇಶ್ವರಬೆಟ್ಟದ ಪೊನ್ನಾಚಿಯಲ್ಲಿ ಕಾಳ್ಗಿಚ್ಚು 
ರಾಜ್ಯ

ಮಲೆಮಹದೇಶ್ವರಬೆಟ್ಟದ ಪೊನ್ನಾಚಿಯಲ್ಲಿ ಕಾಳ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ರಾಜ್ಯದ ಬಂಡೀಪುರ ಅರಣ್ಯ ಪ್ರದೇಶದಲ್ಲಿ ವಾರಗಳ ಕಾಲ ಹಬ್ಬಿದ ಕಾಳ್ಗಿಚ್ಚಿನಿಂದ ಸಾವಿರಾರು ಎಕರೆ ಅರಣ್ಯ ಸುಟ್ಟು ಭಸ್ಮವಾದ ನೆನಪು ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ.

ಚಾಮರಾಜನಗರ: ರಾಜ್ಯದ ಬಂಡೀಪುರ ಅರಣ್ಯ ಪ್ರದೇಶದಲ್ಲಿ ವಾರಗಳ ಕಾಲ ಹಬ್ಬಿದ ಕಾಳ್ಗಿಚ್ಚಿನಿಂದ ಸಾವಿರಾರು ಎಕರೆ ಅರಣ್ಯ ಸುಟ್ಟು ಭಸ್ಮವಾದ ನೆನಪು ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ. ಈ ಬಾರಿ ಚಾಮರಾಜನಗರ ಜಿಲ್ಲೆ ಪ್ರಸಿದ್ದ ಮಲೆಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಕಾಳ್ಗಿಚ್ಚು ರುದ್ರ ನರ್ತನ ತೋರಿದೆ.
ಮಲೆಮಹದೇಶ್ವರ ಬೆಟ್ಟದ ಕಾವೇರಿ ವನ್ಯ ಜೀವಿ ಧಾಮ, ಹನೂರು ತಾಲೂಕಿನ ಪೊನ್ನಾಚಿಯ ಬೆಟ್ಟದ ವ್ಯಾಪ್ತಿಯಲ್ಲಿ ಬೆಂಕಿ ವ್ಯಾಪಿಸಿದ್ದು ನೂರಕ್ಕೆ ಹೆಚ್ಚು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ ಎನ್ನಲಾಗುತ್ತಿದೆ. 
ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಪಡುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಸಣ್ಣದಾಗಿ ಕಾಣಿಸಿಕೊಂಡಿದ್ದ ಬೆಂಕಿ.ಇಂದು ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿದೆ.
"ಕ್ಷುಲ್ಲಕ ಕಾರಣಕ್ಕಾಗಿ ಹಚ್ಚುವ ಬೆಂಕಿಗೆ ಸಾವಿರಾರು ಎಕರೆ ಅರಣ್ಯ ನಾಶವಾಗುತ್ತಿದ್ದು ಗಿಡಮರಗಳು, ಪ್ರಾಣಿ ಸಂಕುಲನಶಿಸುತ್ತಿದೆ. ಬೆಟ್ಟ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿರುವ ಕಾರಣ ಮಾನವ ಪ್ರಯತ್ನದಿಂದ ಬೆಂಕಿ ನಂದಿಸಲು ಸಾಧ್ಯವಾಗುತ್ತಿಲ್ಲ. ಬೆಂಕಿ ಹಚ್ಚಿದವರ ಸುಳಿವು ಲಭ್ಯವಾಗಿದ್ದು ಇನ್ನೆರಡು ದಿನಗಳಲ್ಲಿ ಬಂಧಿಸಲಿದ್ದೇವೆ" ಎಂದು ಮಲೆಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT