ಮಲೆಮಹದೇಶ್ವರಬೆಟ್ಟದ ಪೊನ್ನಾಚಿಯಲ್ಲಿ ಕಾಳ್ಗಿಚ್ಚು 
ರಾಜ್ಯ

ಮಲೆಮಹದೇಶ್ವರಬೆಟ್ಟದ ಪೊನ್ನಾಚಿಯಲ್ಲಿ ಕಾಳ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ರಾಜ್ಯದ ಬಂಡೀಪುರ ಅರಣ್ಯ ಪ್ರದೇಶದಲ್ಲಿ ವಾರಗಳ ಕಾಲ ಹಬ್ಬಿದ ಕಾಳ್ಗಿಚ್ಚಿನಿಂದ ಸಾವಿರಾರು ಎಕರೆ ಅರಣ್ಯ ಸುಟ್ಟು ಭಸ್ಮವಾದ ನೆನಪು ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ.

ಚಾಮರಾಜನಗರ: ರಾಜ್ಯದ ಬಂಡೀಪುರ ಅರಣ್ಯ ಪ್ರದೇಶದಲ್ಲಿ ವಾರಗಳ ಕಾಲ ಹಬ್ಬಿದ ಕಾಳ್ಗಿಚ್ಚಿನಿಂದ ಸಾವಿರಾರು ಎಕರೆ ಅರಣ್ಯ ಸುಟ್ಟು ಭಸ್ಮವಾದ ನೆನಪು ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ. ಈ ಬಾರಿ ಚಾಮರಾಜನಗರ ಜಿಲ್ಲೆ ಪ್ರಸಿದ್ದ ಮಲೆಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಕಾಳ್ಗಿಚ್ಚು ರುದ್ರ ನರ್ತನ ತೋರಿದೆ.
ಮಲೆಮಹದೇಶ್ವರ ಬೆಟ್ಟದ ಕಾವೇರಿ ವನ್ಯ ಜೀವಿ ಧಾಮ, ಹನೂರು ತಾಲೂಕಿನ ಪೊನ್ನಾಚಿಯ ಬೆಟ್ಟದ ವ್ಯಾಪ್ತಿಯಲ್ಲಿ ಬೆಂಕಿ ವ್ಯಾಪಿಸಿದ್ದು ನೂರಕ್ಕೆ ಹೆಚ್ಚು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ ಎನ್ನಲಾಗುತ್ತಿದೆ. 
ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಪಡುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಸಣ್ಣದಾಗಿ ಕಾಣಿಸಿಕೊಂಡಿದ್ದ ಬೆಂಕಿ.ಇಂದು ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿದೆ.
"ಕ್ಷುಲ್ಲಕ ಕಾರಣಕ್ಕಾಗಿ ಹಚ್ಚುವ ಬೆಂಕಿಗೆ ಸಾವಿರಾರು ಎಕರೆ ಅರಣ್ಯ ನಾಶವಾಗುತ್ತಿದ್ದು ಗಿಡಮರಗಳು, ಪ್ರಾಣಿ ಸಂಕುಲನಶಿಸುತ್ತಿದೆ. ಬೆಟ್ಟ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿರುವ ಕಾರಣ ಮಾನವ ಪ್ರಯತ್ನದಿಂದ ಬೆಂಕಿ ನಂದಿಸಲು ಸಾಧ್ಯವಾಗುತ್ತಿಲ್ಲ. ಬೆಂಕಿ ಹಚ್ಚಿದವರ ಸುಳಿವು ಲಭ್ಯವಾಗಿದ್ದು ಇನ್ನೆರಡು ದಿನಗಳಲ್ಲಿ ಬಂಧಿಸಲಿದ್ದೇವೆ" ಎಂದು ಮಲೆಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT