ಮಲೆಮಹದೇಶ್ವರಬೆಟ್ಟದ ಪೊನ್ನಾಚಿಯಲ್ಲಿ ಕಾಳ್ಗಿಚ್ಚು 
ರಾಜ್ಯ

ಮಲೆಮಹದೇಶ್ವರಬೆಟ್ಟದ ಪೊನ್ನಾಚಿಯಲ್ಲಿ ಕಾಳ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ರಾಜ್ಯದ ಬಂಡೀಪುರ ಅರಣ್ಯ ಪ್ರದೇಶದಲ್ಲಿ ವಾರಗಳ ಕಾಲ ಹಬ್ಬಿದ ಕಾಳ್ಗಿಚ್ಚಿನಿಂದ ಸಾವಿರಾರು ಎಕರೆ ಅರಣ್ಯ ಸುಟ್ಟು ಭಸ್ಮವಾದ ನೆನಪು ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ.

ಚಾಮರಾಜನಗರ: ರಾಜ್ಯದ ಬಂಡೀಪುರ ಅರಣ್ಯ ಪ್ರದೇಶದಲ್ಲಿ ವಾರಗಳ ಕಾಲ ಹಬ್ಬಿದ ಕಾಳ್ಗಿಚ್ಚಿನಿಂದ ಸಾವಿರಾರು ಎಕರೆ ಅರಣ್ಯ ಸುಟ್ಟು ಭಸ್ಮವಾದ ನೆನಪು ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅನಾಹುತ ಸಂಭವಿಸಿದೆ. ಈ ಬಾರಿ ಚಾಮರಾಜನಗರ ಜಿಲ್ಲೆ ಪ್ರಸಿದ್ದ ಮಲೆಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಕಾಳ್ಗಿಚ್ಚು ರುದ್ರ ನರ್ತನ ತೋರಿದೆ.
ಮಲೆಮಹದೇಶ್ವರ ಬೆಟ್ಟದ ಕಾವೇರಿ ವನ್ಯ ಜೀವಿ ಧಾಮ, ಹನೂರು ತಾಲೂಕಿನ ಪೊನ್ನಾಚಿಯ ಬೆಟ್ಟದ ವ್ಯಾಪ್ತಿಯಲ್ಲಿ ಬೆಂಕಿ ವ್ಯಾಪಿಸಿದ್ದು ನೂರಕ್ಕೆ ಹೆಚ್ಚು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ ಎನ್ನಲಾಗುತ್ತಿದೆ. 
ಬೆಂಕಿ ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಪಡುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಸಣ್ಣದಾಗಿ ಕಾಣಿಸಿಕೊಂಡಿದ್ದ ಬೆಂಕಿ.ಇಂದು ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿದೆ.
"ಕ್ಷುಲ್ಲಕ ಕಾರಣಕ್ಕಾಗಿ ಹಚ್ಚುವ ಬೆಂಕಿಗೆ ಸಾವಿರಾರು ಎಕರೆ ಅರಣ್ಯ ನಾಶವಾಗುತ್ತಿದ್ದು ಗಿಡಮರಗಳು, ಪ್ರಾಣಿ ಸಂಕುಲನಶಿಸುತ್ತಿದೆ. ಬೆಟ್ಟ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿರುವ ಕಾರಣ ಮಾನವ ಪ್ರಯತ್ನದಿಂದ ಬೆಂಕಿ ನಂದಿಸಲು ಸಾಧ್ಯವಾಗುತ್ತಿಲ್ಲ. ಬೆಂಕಿ ಹಚ್ಚಿದವರ ಸುಳಿವು ಲಭ್ಯವಾಗಿದ್ದು ಇನ್ನೆರಡು ದಿನಗಳಲ್ಲಿ ಬಂಧಿಸಲಿದ್ದೇವೆ" ಎಂದು ಮಲೆಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT