ರಾಜ್ಯ

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ 5 ಸಾವು

Vishwanath S
ಚಿತ್ರದುರ್ಗ: ಚಿತ್ರದುರ್ಗದ ಹಿರಿಯೂರು ಬಳಿ ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಭದ್ರಾವತಿಯಿಂದ ಬೆಂಗಳೂರಿಗೆ 9 ಜನರು ಕಾರಿನಲ್ಲಿ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಿರಿಯೂರು ಬಳಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು ಇನ್ನು ನಾಲ್ವರ ಪರಿಸ್ಥಿತಿ ಗಂಭೀರವಾಗಿದ್ದು ಅವರನ್ನು ಹಿರಿಯೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 
ಮೃತರನ್ನು ಬೆಂಗಳೂರಿನ ತಾಯಮ್ಮ, ಸುಶ್ಮಿತಾ, ಲತಾ, ವರ್ಣಿಕಾ ಹಾಗೂ ಜಾಹ್ನವಿ ಎಂದು ತಿಳಿದುಬಂದಿದೆ.
SCROLL FOR NEXT