ಹೇಮಂತ್ ಕುಮಾರ್ 
ರಾಜ್ಯ

ಗೃಹ ಸಚಿವರ ಹೆಸರಿನಲ್ಲಿ ನಕಲಿ ಪತ್ರ: ಪತ್ರಕರ್ತ ಹೇಮಂತ್ ಕುಮಾರ್ ಗೆ ಷರತ್ತುಬದ್ಧ ಜಾಮೀನು

ಪ್ರತ್ಯೇಕ ಲಿಂಗಾಯತ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿದ ಆರೋಪದಡಿ...

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲ್ ಅವರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಪತ್ರಕರ್ತ ಹೇಮಂತ್‌ ಕುಮಾರ್‌ ಅವರಿಗೆ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್‍ ಪ್ರಕರಣಗಳ ವಿಶೇಷ ವಿಚಾರಣಾ ನ್ಯಾಯಾಲಯ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 
ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು, 50 ಸಾವಿರ ರೂ. ಮೊತ್ತದ ವೈಯಕ್ತಿಕ ಬಾಂಡ್, 50 ಸಾವಿರ  ರೂ. ಮೊತ್ತದ ಶ್ಯೂರಿಟಿ ಸಲ್ಲಿಸುವಂತೆ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದರು.
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ ಹೇಮಂತ್ ಕುಮಾರ್ ಅವರು ತಮ್ಮ ಹೆಸರಿನಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನಕಲಿ ಪತ್ರ ಬರೆದಿದ್ದಾರೆ ಎಂದು ಆರೋಪಿಸಿ ಗೃಹ ಸಚಿವ ಎಂ.ಬಿ.ಪಾಟೀಲ್ ವಿಜಯಪುರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಸಂಬಂಧ ಪೊಲೀಸರು 'ಪೋಸ್ಟ್  ಕಾರ್ಡ್' ವೆಬ್ ಪೋರ್ಟಲ್ ಸಂಪಾದಕ ವಿಕ್ರಂ ಹೆಗ್ಡೆ ಅವರನ್ನು ಬಂಧಿಸಿದ್ದರು. ಅವರ ವಿಚಾರಣೆ ವೇಳೆ ದೊರೆತ ಮಾಹಿತಿ ಆಧರಿಸಿ, ಪತ್ರಕರ್ತ ಹೇಮಂತ್ ಕುಮಾರ್ ಅನ್ನು ಬಂಧಿಸಿದ್ದರು. ನ್ಯಾಯಾಲಯ ಹೇಮಂತ್ ಅವರನ್ನು ಏ.30ರವರೆಗೆ ಪೊಲೀಸ್ ಕಸ್ಟಡಿಗೆ ಹಾಗೂ ನಂತರ, ಮೇ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ