ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕಕ್ಕೆ ನೀರು ಬಿಡುಗಡೆ ಮಾಡಲು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಒಪ್ಪಿಗೆ

ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನಿಂದ ಕೃಷ್ಣಾ ನದಿ ಮತ್ತು ಅದರ ಉಪ ನದಿಗಳಿಗೆ 2 ಟಿಎಂಸಿ ನೀರನ್ನು ...

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ ಅಣೆಕಟ್ಟಿನಿಂದ ಕೃಷ್ಣಾ ನದಿ ಮತ್ತು ಅದರ ಉಪ ನದಿಗಳಿಗೆ 2 ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಒಪ್ಪಿಕೊಂಡಿದ್ದಾರೆ.
ಇದರಿಂದ ಉತ್ತರ ಕರ್ನಾಟಕ ಬರಗಾಲ ಪೀಡಿತ ಪ್ರದೇಶಗಳಿಗೆ ನೀರಿಗೆ ಸ್ವಲ್ಪ ಸಹಾಯವಾಗಲಿದೆ. ಉತ್ತರ ಕರ್ನಾಟಕದ ಬಿಜೆಪಿ ರಾಜ್ಯಸಭಾ ಸದಸ್ಯ ಪ್ರಭಾಕರ್ ಕೋರೆ ನೇತೃತ್ವದಲ್ಲಿ ಬಿಜೆಪಿ ನಾಯಕರು ಮತ್ತು ಶಾಸಕರ ನಿಯೋಗ ಮುಂಬೈಯಲ್ಲಿ ನಿನ್ನೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿ ಸುಮಾರು 40 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ತಕ್ಷಣವೇ ನೀರು ಬಿಡುಗಡೆ ಮಾಡಬೇಕೆಂದು ಉತ್ತರ ಕರ್ನಾಟಕದ ಬರಗಾರ ಪರಿಸ್ಥಿತಿ ಬಗ್ಗೆ ವಿವರಿಸಿದ್ದರು.
ನಿಯೋಗದಲ್ಲಿ ರಾಜ್ಯದ ವಿರೋಧಪಕ್ಷದ ಮುಖ್ಯ ಸಚೇತಕ ಮಹಂತೇಶ್ ಕವಟಗಿಮಠ, ಶಾಸಕರಾದ ಶಶಿಕಲಾ ಜೊಲ್ಲೆ, ಪಿ ರಾಜೀವ್, ದುರ್ಯೋಧನ ಐಹೊಳೆ, ಮಾಜಿ ಸಚಿವ ಲಕ್ಷ್ಮಣ ಸವದಿ, ಮಾಜಿ ಶಾಸಕ ರಾಜು ಕಾಗೆ, ಸಿದ್ದು ಸವದಿ ಮತ್ತು ಅಣ್ಣಾಸಾಹೇಬ್ ಜೊಳ್ಳೆ ಉಪಸ್ಥಿತರಿದ್ದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸಿದ ಬಳಿಕ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ ಕವಟಗಿಮಠ, ರಾಜ್ಯದಲ್ಲಿ ನೀರಿನ ಬರಗಾಲದಿಂದ ರೈತರಿಗೆ ಆಗುವ ಸಂಕಷ್ಟದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನದಟ್ಟು ಮಾಡಿದೆವು. ನೀರನ್ನು ತಕ್ಷಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ದೇವೇಂದ್ರ ಫಡ್ನವೀಸ್ ತಿಳಿಸಿದ್ದಾರೆ.
ಅದೇ ರೀತಿ ಕರ್ನಾಟಕದ ಅಣೆಕಟ್ಟುಗಳಿಂದ ಮಹಾರಾಷ್ಟ್ರದ ಜಾಟ್ ಸಮುದಾಯದವರ ಪ್ರದೇಶಗಳಿಗೆ ನೀರು ಬಿಡುಗಡೆ ಮಾಡುವಂತೆ ಕೂಡ ಹೇಳಿದ್ದಾರೆ. ನೀರಿನ ಹಂಚಿಕೆಗೆ ಸಂಬಂಧಪಟ್ಟಂತೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಹೇಳಿದ್ದು ಅಲ್ಲದೆ ಎರಡೂ ರಾಜ್ಯಗಳ ನಡುವಿನ ನೀರಿನ ಹಂಚಿಕೆಗೆ ಸಂಬಂಧಪಟ್ಟಂತೆ ಸಹಿ ಮಾಡಿರುವುದನ್ನು ಜಾರಿಗೆ ತರುವ ಬಗ್ಗೆ ಕೂಡ ಅವರು ಒಲವು ತೋರಿಸಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT